10 ನೇಯ ದಿನದ ಚಿಕ್ಕೋಡಿ ಜಿಲ್ಲಾ ಹೋರಾಟ ಮುಂದೆವರಿದಿದ್ದು, ಹೋರಾಟಗಾರರು ಚಿಕ್ಕೋಡಿ ಪ್ರವಾಸಿ ಮಂದಿರದಿಂದ ತಹಶೀಲ್ದಾರ ಕಾರ್ಯಾಲಯದ ವರೆಗೆ ದೀಡನಮಸ್ಕಾರ ಹಾಕುತ್ತ , ಪ್ರತಿಭಟನೆ ಕೈಗೊಂಡರು, ಕೆಲ ಸಮಯ ಸಂಚಾರ ಅಸ್ತ ವ್ಯಸ್ತವಾಗಿತ್ತು, ತಹಶೀಲ್ದಾರ ಕಚೇರಿಯ ಬಾಗಿಲಿಗೆ ಪಟ್ಟು ಹಿಡಿದು ಕೂತ ಹೋರಾಟಗಾರರು, ಸರಕಾರ ಮತ್ತು ಜನಪ್ರತಿನಿಧಿಗಳ ವಿರುದ್ಧ ಘೋಷನೆ ಕೂಗಿದರು, ತಹಶೀಲ್ದಾರರು ಕಚೇರಿಗೆ ಆಗಮಿಸಿದಾಗ ಅವರಿಗೆ ದಿಗ್ಭಂಧನ ಹಾಕುವ ಮೂಲಕ ಪ್ರತಿಭಟಿಸಿದರು, ಕಾರ್ಯಾಲಯವನ್ನು ಮುತ್ತಿಗೆ ಹಾಕಲು ಪ್ರಯತ್ನಿಸಿರುವ ಪ್ರತಿಭಟನಾಕಾರರನ್ನು, ಸಿ.ಪಿ.ಆಯ್. ಆರ್. ಆರ್. ಪಾಟೀಲ ಮತ್ತು ಪಿ. ಎಸ್. ಆಯ್. ಯಮಣಪ್ಪಾ ಮಾಂಗ ಇವರ ನೇತೃತ್ವದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡರು, ಕೆಲ ಕಾಲಗಳ ನಂತರ ಬಿಡುಗಡೆಗೊಳಿಸಿದರು, ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಕಾಶಿನಾಥ ಕುರಣಿ ಮಾತನಾಡಿ, ಕಳೆದ ಹಲವಾರು ದಶಕಗಳಿಂದ ಚಿಕ್ಕೋಡಿ ಜಿಲ್ಲೆಗಾಗಿ ನಡೆದ ಹೋರಾಟ, ಯಾವೊಂದು ಸರಕಾರ ಚಿಕ್ಕೋಡಿ ಜಿಲ್ಲೆ ಘೋಷನೆ ಮಾಡದೇ, ಚಿಕ್ಕೋಡಿ ವಿಭಾಗದ ಜನರಿಗೆ ಮೋಸ ಮಾಡುತ್ತಿದೆ, ಚಿಕ್ಕೋಡಿ ಜಿಲ್ಲೆಯಾದರೆ, ಈ ಭಾಗದ ಹಳ್ಳಿಗಳು ಅಭಿವೃದ್ಧಿ ಆಗುವ ಜೊತೆಗೆ, ರೈತರ ಮಕ್ಕಳು ಉನ್ನತ ವಿದ್ಯಾಭ್ಯಾಸ ಮಾಡಲು ಹಾಗೂ ರೈತರ ಉತ್ಪಣ್ಣಗಳಿಗೆ ಸೂಕ್ತ ಬೆಲೆ ಸಿಗಲಿದೆ, ಚಿಕ್ಕೋಡಿ ಜಿಲ್ಲೆಯಾದರೆ ಉದ್ಯಮಿ, ವ್ಯಾಪಾರಿ, ರೈತ, ಕೂಲಿಕಾರ, ವಿದ್ಯಾವಂತ ಯುವಕರಿಗೂ ಸಹ ಉದ್ಯೋಗ ಸಿಗಲಿದೆ, ಪ್ರತಿಯೊಂದು ಕುಟುಂಬವೂ ಸಹ ಸ್ವಾವಲಂಬಿ ಬದುಕು ಕಟ್ಟಲು ಮಾರ್ಗವಾಗಲಿದೆ, ಈ ಕೂಡಲೇ ಚಿಕ್ಕೋಡಿ ಜಿಲ್ಲೆಯಾಗಿ ಘೋಷನೆಯಾಗಬೇಕು, ಎಂದು ಹೇಳಿದರು, ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ಎಷ್ಟೋ ಸಲ ಪ್ರತಿಭಟನೆ ಮಾಡಿದರೂ ಯಾವೊಬ್ಬ ಜನಪ್ರತಿನಿಧಿಯೂ ಚಿಕ್ಕೋಡಿ ಜಿಲ್ಲೆ ಮಾಡಲು ಮುಂದಾಗುತ್ತಿಲ್ಲ, ಚುನಾವಣೆ ಬಂದಾಗ ಮಾತ್ರ ಚಿಕ್ಕೋಡಿ ಜಿಲ್ಲೆಯ ಬಗ್ಗೆ ನೆನಪಾಗುತ್ತದೆ, ತದನಂತರ ತಮ್ಮದೇ ಆದ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ನಿರತರಾಗುತ್ತಾರೆ, ಬರುವ ಚುನಾವಣೆ ಸಮಯದಲ್ಲಿ ನಮ್ಮ ಭಾಗದ ಹಳ್ಳಿ ಹಳ್ಳಿಗಳಿಗೆ ತೆರಳಿ ನೋಟಾ ವೋಟು ಹಾಕುವಂತೆ ಜನರಲ್ಲಿ ಮನವಿ ಮಾಡುತ್ತೇವೆ, ಉತ್ತರ ಕರ್ನಾಟಕ ಭಾಗದ ಸ್ವಾರ್ಥ ರಾಜಕಾರಣಿಗಳು ಜನರ ಬೇಡಿಕೆಗೆ ಬೆಲೆ ಕೊಡುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು. ಜಿಲ್ಲಾ ಮುಖಂಡರಾದ ಸಂಜು ಬಡಿಗೇರ ಮಾತನಾಡಿ, ನಮ್ಮ ಭಾಗದ ಜನರು ಸರಕಾರದ ಸೌಲಭ್ಯಗಳಿಂದ ವಂಚಿತರಾಗಿ ಹೈರಾನಾಗಿದ್ದಾರೆ, ಚಿಕ್ಕೋಡಿ ಜಿಲ್ಲೆಯಾದರೆ ಹೆಚ್ಚು ಅನುದಾನ ಬರುವುದರಿಂದ ನೀರಾವರಿ ಸೌಲಭ್ಯಗಳು ಜಾರಿಯಾಗಲಿವೆ, ಚಿಕ್ಕೋಡಿ ಮಾರುಕಟ್ಟೆ ಆಗುವುದರಿಂದ ಎಲ್ಲ ಕ್ಷೇತ್ರಗಳಿಗೆ ಉತ್ತಮ ಸೌಲಭ್ಯಗಳು ದೊರೆಯಲಿವೆ, ಕೂಡಲೇ ಚಿಕ್ಕೋಡಿ ಜಿಲ್ಲೆ ಘೋಷನೆಯಾಗಬೇಕೆಂದು ಹೇಳಿದರು, ಈ ಸಂಧರ್ಭದಲ್ಲಿ ಹೋರಾಟಗಾರರಾದ ರಮೇಶ ಡಂಗೇರ, ಮಾಳಪ್ಪಾ ಕರೆಣ್ಣವರ, ರಫೀಕ್ ಪಠಾಣ, ಸಚೀನ ದೊಡ್ಡಮನಿ, ಸಿದ್ದು ಕಾಂಬಳೆ, ಅಮೂಲ ನಾವಿ, ವಿಜಯ ಬ್ಯಾಳೆ, ನಕುಲ ಕಂಬಾರ, ಖಾನಪ್ಪಾ ಬಾಡಕರ, ಶಿವು ಶಾಡಬಿದ್ರೆ, ಸತ್ಯಪ್ಪಾ ಕಾಂಬಳೆ, ಶ್ರೀಕಾಂತ ಅಸೋದೆ, ರೈತ ಮುಖಂಡ ಸಿದ್ರಾಮ್ ಕರಗಾಂವೆ, ನಾಗೇಶ ಮಾಳಿ, ಚನ್ನಪ್ಪಾ ಬಡಿಗೇರ ಸೇರಿದಂತೆ ಕನ್ನಡಪರ, ರೈತಪರ, ಮಹಿಳಾ ಮತ್ತು ದಲಿತ ಸಂಘನೆಗಳ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು...

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಕ್ಕೇರಿ : ಜುಲೈ 29 – ಹುಕ್ಕೇರಿ ತಾಲೂಕಿನ ಶಿಂದಿಹಟ್ಟಿ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಸುಟ್ಟು ಸುಮಾರು ₹25 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ. ರಾಮಪ್ಪ ಲಕ್ಷ್ಮಣ ಮಗದುಮ್ಮ ಅವರ ಮನೆಗೆ ಈ ದುರ್ಘಟನೆ ಸಂಭವಿಸಿದ್ದು, ಕುಟುಂಬ ಸಂಪೂರ್ಣವಾಗಿ ಬೀದಿಗೆ ಬಿದ್ದಿದೆ ಎಂದು ನೊಂದವರು ದೂರಿದ್ದಾರೆ.ಘಟನೆಯು ಸಂಭವಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬುದು ಸ್ಥಳೀಯರ ಆಕ್ರೋಶ. "ಇನ್ನಾದರೂ ಅಧಿಕಾರಿಗಳು ನೊಂದವರಿಗೆ ನೆರವಾಗಬೇಕು," ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ. ಕಾಂಬಳೆ ಅವರು ಖಂಡಿಸಿದ್ದಾರೆ.ಈ ವಿಚಾರ ತಿಳಿದ ಧ್ವನಿ ಸಂಘಟನೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಸ್ಥಳಕ್ಕೆ ತಕ್ಷಣ ದೌಡಾಯಿಸಿ ನೊಂದ ಕುಟುಂಬಕ್ಕೆ ದಿನಸಿ, ಬಟ್ಟೆ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಿಸಿ ಧೈರ್ಯ ತುಂಬಿದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ ಕಾಂಬಳೆ, ತಾಲೂಕಾ ಉಪಾಧ್ಯಕ್ಷ ಸಂತೋಷ ಪಾಟೀಲ, ಕಾರ್ಯದರ್ಶಿ ಶಾಂತಿನಾಥ ಮಗದುಮ್ಮ ಹಾಗೂ ಖಜಾಂಚಿ ಮಹಾಂತೇಶ ಬೇವಿಕಟ್ಟಿ ಉಪಸ್ಥಿತರಿದ್ದರು. ವರದಿ : ಸಂತೋಷ್ ಪಾಟೀಲ್, ಹುಕ್ಕೇರಿ.

ಹುಕ್ಕೇರಿ : ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮ ಪಂಚಾಯತ ಸಭಾ ಭವನ ಕಟ್ಟಡ ಉದ್ಘಾಟನಾ ಸಮಾರಂಭ ಜರಗಿತು 15ನೇ ಹಣಕಾಸು ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಗ್ರಾಮ ಪಂಚಾಯತ್ ಸಭಾ ಭವನ ಕಟ್ಟಡದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಹೈಷಿಕೇಶಾನಂದ ಬಾಬು ಮಹಾರಾಜರು ಮದಿಹಳ್ಳಿ ಹಾಗೂ ಶ್ರೀ ವಾಮನದೇವರು ಮದಿಹಳ್ಳಿ ಉದ್ಘಾಟಕರಾದ ಶ್ರೀ ಟಿ ಆರ್ ಮಲ್ಲಾಡದ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ್ ಪಂಚಾಯತ್ ಹುಕ್ಕೇರಿ ಹಾಗೂ ಶ್ರೀಮತಿ ಲಕ್ಕವ್ವ ಬಾಳಪ್ಪ ಬಾಗಿ ಅಧ್ಯಕ್ಷರು ಗ್ರಾಮ ಪಂಚಾಯತ ಮುದಿಹಳ್ಳಿ ಶ್ರೀಮತಿ ಕೋಮಲ ಬಸವರಾಜ್ ಹೊಸಮನಿ ಉಪಾಧ್ಯಕ್ಷರು ಹಾಗೂ ಶ್ರೀ ಸುರೇಶ್ ತಳವಾರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತ್ ಮದಿಹಳ್ಳಿ ಇವರ ಅಮೃತ ಹಸ್ತದಿಂದ ಉದ್ಘಾಟನಾ ಸಮಾರಂಭ ಜರುಗಿತು ಈ ಸಮಾರಂಭದಲ್ಲಿ ಶ್ರೀಮತಿ ಲಕ್ಕವ್ವಾ ಬಾಳಪ್ಪ ಬಾಗಿ ಅಧ್ಯಕ್ಷರು. ಸದಸ್ಯರಾದ ಹಸನ್ ರಾಜೇಸಾಬ್ ಸನದಿ. ಶ್ರೀ ಶಿವಾಜಿ ಶೆಟ್ಟೆಪ್ಪ ಗಾಡಿವಡ್ಡರ್. ಶ್ರೀ ಕಾಶಿನಾಥ್ ಓಮಣ್ಣಾ ಮುತಗಿ. ಸದ್ದಾಂ ಮಲಿಕ್ ಬಳಿಗಾರ. ಗಣಪತಿ ಮುರಾರಿ ವಾಳಕಿ. ಶ್ರೀಮತಿ ಶೋಭಾ ಶಿವಾನಂದ ಖಾನಾಪುರಿ. ಶ್ರೀಮತಿ ಶಂಕರವ್ವ ಬೋರಪ್ಪ ತಳವಾರ. ಶ್ರೀಧರ್ ಕಾಡಪ್ಪ ಚೌಗಲಾ. ಕೆಂಪಣ್ಣಾ ಚೌಗಲಾ. ಸತ್ಯಪ್ಪ ಶಿವಲಿಂಗ ಮಾದರ. ಗುರುಸಿದ್ಧ ಬಸವವಂತ ಹಿಡಕಲ್. ಶ್ರೀಮತಿ ದಾನಮ್ಮ ರಮೇಶ್ ಆಲಗೂರಿ. ಶ್ರೀಮತಿ ಶಿವಕ್ಕಾ ಪುಂಡಲೀಕ. ಶ್ರೀಮತಿ ಯಲ್ಲವ್ವ ಮಾರುತಿ ಕುರುಬರ. ರವೀಂದ್ರ ಬಾಬು ಚಾಗಲಾ. ಭೀಮ್ ಸೇನ್ ಬಾಗಿ.ಡಾ.ಕಾಡೇಶ ಹೊಸಮನಿ. ಅಂಬರೀಶ್ ಬನ್ನಕಗೋಳ. ಮಲ್ಲಿಕಾರ್ಜುನ್ ಗೋಟೂರಿ. ಸಂತೋಷ್ ಪಾಟೀಲ್. ಸದಾ ಬಾಗಿ. ಮಲ್ಲಪ್ಪ ಮಾಣಗಾವಿ. ಸುಲ್ತಾನ್ ಸನದಿ. ಶಿವಪ್ಪ ಮುತ್ತಗಿ. ಸಂಜು ಗಾಯಕವಾಡ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನಿ. ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಸಿಬ್ಬಂದಿ ವರ್ಗದವರು ಮದಿಹಳ್ಳಿ ಶಿರಗಾಂವ ಎಸ್ ಡಿ ಎಮ್ ಸಿ ಅಧ್ಯಕ್ಷರು ಸರ್ವ ಸದಸ್ಯರು ಮದಿಹಳ್ಳಿ ಮತ್ತು ಶಿರಗಾವ್ ಗ್ರಾಮದ ಊರಿನ ಗುರು ಹಿರಿಯರು ಮುಖಂಡರು ಮಹಿಳೆಯರು ಉಪಸ್ಥಿತರಿದ್ದರು. ವರದಿ : ಸಂತೋಷ ಪಾಟೀಲ್, ಹುಕ್ಕೇರಿ.

ರಾಯಬಾಗ : ಇಂದು ನಾವು 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. 1947 ರ ಆಗಸ್ಟ್ 15 ರಂದು ನಾವು ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದ ದಿನವನ್ನು ಸ್ಮರಿಸುತ್ತೇವೆ. ಈ ದಿನವನ್ನು ಆಚರಿಸುವಾಗ, ನಾವು ನಮ್ಮ ದೇಶಕ್ಕಾಗಿ ಹೋರಾಡಿದ ಎಲ್ಲ ಮಹಾನ್ ನಾಯಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿಕೊಳ್ಳುತ್ತೇವೆ.ಭಾರತವು ಒಂದು ಬೃಹತ್ ಮತ್ತು ವೈವಿಧ್ಯಮಯ ದೇಶ. ನಾವು ಅನೇಕ ಭಾಷೆಗಳು, ಸಂಸ್ಕೃತಿಗಳು ಮತ್ತು ಧರ್ಮಗಳನ್ನು ಹೊಂದಿದ್ದೇವೆ, ಆದರೆ ನಾವು ಒಂದೇ ರಾಷ್ಟ್ರದ ಭಾಗವಾಗಿದ್ದೇವೆ. ನಮ್ಮೆಲ್ಲರನ್ನೂ ಒಂದುಗೂಡಿಸುವ ಅಂಶವೆಂದರೆ ನಮ್ಮ ದೇಶದ ಮೇಲಿನ ಪ್ರೀತಿ ಮತ್ತು ಗೌರವ.ಸ್ವಾತಂತ್ರ್ಯವೆಂದರೆ ಕೇವಲ ರಾಜಕೀಯ ಸ್ವಾತಂತ್ರ್ಯವಲ್ಲ. ಇದು ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸ್ವಾತಂತ್ರ್ಯವನ್ನು ಒಳಗೊಂಡಿದೆ. ನಾವು ನಮ್ಮ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಶ್ರಮಿಸಬೇಕು. ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಶಾಖೆ ರಾಯಬಾಗ ಅಧ್ಯಕ್ಷರಾದ ಉಮೇಶ ಭೂಪಾಲ ಪೋಳ ಹೇಳಿದರು, ಅವರು ರಾಯಬಾಗ ಸರ್ಕಾರಿ ನೌಕರರ ಭವನದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಎಲ್ಲರಿಗೂ 79ನೇ ಸ್ವಾತಂತ್ರ್ಯ ದಿನಾಚರಣೆ ಶುಭಾಶಯಗಳು ತಿಳಿಸುತ್ತಾ ಮಾತನಾಡಿದರು, ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುರೇಶ್ ಕದ್ದು, ರಾಜ್ಯ ಪರಿಷತ್ ಸದಸ್ಯರಾದ ಮಲಿಕಜಾನ್ ಕೊರ್ಬು, ಸಂಘಟನಾ ಕಾರ್ಯದರ್ಶಿ ಕಲ್ಲಪ್ಪ ಗುಡಿಮನಿ, ನಾಮ ನಿರ್ದೇಶಿತ ನಿರ್ದೇಶಕರಾದ ಭಗವಂತ ಮಸಾಲಜಿ, ನಿಂಗಪ್ಪ ಬೀರಣಗಡ್ಡಿ, ಸದಾಶಿವ ಕಾಂಬಳೆ, ಪರಶುರಾಮ ಕುಂಬಾರ, ಸವಿತಾ ಜೋಲಾಪೂರೆ, ಮತ್ತಿತರು ಹಾಜರಿದ್ದರು.