*ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ( KWJV) ಸಂಘಟನೆಯಿಂದ ಆಗಸ್ಟ್ 14, 2023 ಸೋಮವಾರ ರಂದು ನಾಡಿನ ಕಾರ್ಯನಿರತ ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಧರಣಿ ಪ್ರತಿಭಟನೆಯ ಹೋರಾಟ* :- ಸ್ವಾತಂತ್ಯ್ರ ದೊರೆತು 76 ನೇ ವರ್ಷದತ್ತಾ ಸಾಗುತ್ತಿದ್ದರೂ ನಾಡಿನ ಕಾರ್ಯನಿರತ ಪತ್ರಕರ್ತರಿಗೆ ಇಂದಿಗೂ ಸ್ವಾತಂತ್ಯ್ರ ಹಾಗೂ ಮೂಲಭೂತ ಸೌಕರ್ಯ ದೊರೆಯದಿರುವುದು ದುರಾದೃಷ್ಟಕರ. ಸರ್ಕಾರ ಹಾಗೂ ಸಾರ್ವಜನಿಕರ ಮಧ್ಯ ಸಂಪರ್ಕ ಸೇತುವೆಯಾಗಿ ಪ್ರಾಣದ ಹಂಗನ್ನು ತೊರೆದು ನಿಸ್ವಾರ್ಥ ಸೇವೆಯಲ್ಲಿ‌ ತೊಡಗಿರುವ ಪತ್ರಕರ್ತರುಗಳಿಗೆ ಕನಿಷ್ಠ ಸೇವಾಭದ್ರತೆ ಇಲ್ಲ, ಪತ್ರಕರ್ತರುಗಳಿಗೆ ರಕ್ಷಣೆ ಮರೀಚಿಕೆಯತ್ತಾ ಸಾಗುತ್ತಿದೆ, ಅಕ್ರಿಡೇಷನ್ ನೆಪದಲ್ಲಿ ವಾರ್ತಾ ಇಲಾಖೆ ಪತ್ರಕರ್ತರುಗಳ ಮಧ್ಯ ತಾರತಮ್ಯ ಹಾಗೂ ಅಸ್ಪೃಶ್ಯತೆ ನೀತಿ ಮಾಡುತ್ತಾ, ರಾಜ್ಯದಲ್ಲಿ ಹತ್ತು (10,000) ಸಾವಿರಕ್ಕೂ ಮೇಲ್ಪಟ್ಟು ಪತ್ರಕರ್ತರು ಕಾರ್ಯನಿರ್ವಹಿಸುತ್ತಿದ್ದರೂ ಕೇವಲ 1500 ಪತ್ರಕರ್ತರಿಗೆ ಮಾತ್ರ ಪತ್ರಕರ್ತರ ಮಾನ್ಯತಾ ಪತ್ರ ನೀಡಿದ್ದು,ಇದರಲ್ಲಿ ಹವ್ಯಾಸಿ ಪತ್ರಕರ್ತರು 167, ಪತ್ರಿಕೆಯ ಮಾಲಿಕರು/ಸಂಪಾದಕರು 799, ಮಾಲಿಕರ ಹೆಂಡತಿ,ಮಕ್ಕಳು,ಅಳಿಯಂದಿರು ಸೇರಿ 134, ಒಟ್ಟು 1100 . ಇನ್ನುಳಿದಂತ 400 ಅಕ್ರಿಡೇಷನ್ ಕಾರ್ಡ್ ಗಳು, ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುವ ದಿನ ಪತ್ರಿಕೆಯ ವರದಿಗಾರ ರೊಬ್ಬರಿಗೆ ಅಕ್ರಿಡೇಷನ್ ಪ್ರಸ್ತುತ ದೊರೆಯುತ್ತಿದೆ.ಜಿಲ್ಲೆಯ ಒಂದು ಪತ್ರಿಕೆಯಿಂದ ಒಬ್ಬರಿಗೆ ಈ ಸೌಲಭ್ಯ ದೊರೆತರೆ ಉಳಿದಂತ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅದೇ ಪತ್ರಿಕೆಯ ಪತ್ರಕರ್ತರ ಪಾಡೇನು. ಅವರೂ ಪತ್ರಕರ್ತರಲ್ಲವೆ ಅಥವಾ ನಕಲಿನಾ ಎಂಬುದರ ಕುರಿತು ಸ್ಪಷ್ಟನೇ ವಾರ್ತಾ ಇಲಾಖೆಯಿಂದ ದೊರೆಯಬೇಕಾಗಿದೆ. ಅಕ್ರಿಡೇಷನ್ ನಿಯಮ 9 ರ ನಿಯಮದಲ್ಲಿ "ಮಾನ್ಯತೆಯು ಸುದ್ದಿ ಮಾಧ್ಯಮದ ಪ್ರತಿನಿಧಿಗಳಿಗೆ ಅಧಿಕೃತ ಸ್ಥಾನಮಾನ ನೀಡುವುದಿಲ್ಲ. ಬದಲಿಗೆ ಇಂತಹ ಮಾಧ್ಯಮ ಸಂಸ್ಥೆಯನ್ನು ಪ್ರತಿನಿಧಿಸುತ್ತಾರೆಂದಷ್ಟೇ ಗುರುತಿಸುತ್ತದೆ ಜೊತೆಗೆ ಮಾಧ್ಯಮ ಪ್ರತಿನಿಧಿಗಳು, ಪ್ರತಿನಿಧಿಸುವ ಮಾಧ್ಯಮಗಳಲ್ಲಿ ಮತ್ತು ಪರಿಚಯ ಪತ್ರಗಳಲ್ಲಿ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದವರು ಎಂದು ನಮೂದಿಸುವುದು ನಿಯಮ ಬಾಹಿರ ಎಂದು ಸ್ಪಷ್ಟವಾಗಿದ್ದರೂ ಇವರುಗಳಿಗೆ ಸರ್ಕಾರದಿಂದ ಹೆಚ್ಚಿನ ಆಧ್ಯತೆ,ವಿಧಾನಸೌಧ,ವಿಕಾಸಸೌಧ,ಉತ್ಸವಗಳ ಪ್ರವೇಶವಿರಬಹುದು,ಮೀಡಿಯಾ ಕಿಟ್ ವಿತರಣೆಯಾಗಿರಬಹುದು ಹಾಗೂ ಇನ್ನೀತರ ಸೌಲಭ್ಯಗಳಲ್ಲೂ ಮಾನ್ಯತೆ ಹೊಂದಿದವರಿಗೆ ಮಾತ್ರ ಎಂದು ಉಳಿದಂತ ಪತ್ರಕರ್ತರಿಗೆ ಕಿವಿಗೆ ಇಷ್ಟು ವರ್ಷಗಳ ಕಾಲ ಮಲ್ಲಿಗೆ ಹೂ ವಿಡುತ್ತಾ ಸಾಗಿರುವುದು ಕಾನೂನು ಸ್ಪಷ್ಟ ಉಲ್ಲಂಘನೆಯಾಗಿರತ್ತದೆ. ಆರ್.ಎನ್.ಐ. ಹೊಂದಿ ಕಾರ್ಯನಿರ್ವಹಿಸುವ ಪತ್ರಿಯೊಬ್ಬ ಪತ್ರಕರ್ತರು ಪತ್ರಕರ್ತರೇ.ಇವತ್ತು ವಾರ್ತಾ ಇಲಾಖೆಯಲ್ಲಿ ಬೇಕಾಬಿಟ್ಟಿಯಾಗಿ ಅಕ್ರಿಡೇಷನ್ ಕಾರ್ಡ್ ಸಿಕ್ಕ ಸಿಕ್ಕವರಿಗೆ ಅಂದರೆ ನಿಯಮಾನುಸಾರ ಪೂರ್ಣಾವಧಿಗೆ ಖಾಯಂ ನೇಮಕಾತಿ ಪತ್ರವಿರದಂತ ಅನೇಕರಿಗೆ ನೀಡಲಾಗಿದೆ. ಇನ್ನೂ ಕೆಲವರು ಆ ಸಂಸ್ಥೆಯನ್ನು ಬಿಟ್ಟಿದ್ದರೂ ಹಾಗೆ ಮುಂದುವೆರೆಸಿಕೊಂಡು ಅಕ್ರಿಡೇಷನ್ ದರ್ಬಾರ್ ಸಾಗಿಸುತ್ತಿದ್ದಾರೆ. ಈ ಕುರಿತು ನನ್ನ ಬಳಿ ಅನೇಕ ಸಾಕ್ಷಾಧಾರಗಳು ಇವೆ. ಇನ್ನೂ ಸಂಕಷ್ಟದಲ್ಲಿರುವ ಪತ್ರಕರ್ತರ ಮಸಾಶನ ನಿಯಮ 7 ರಲ್ಲಿ ವಾರ,ಪಾಕ್ಷಿಕ,ಮಾಸ ಹಾಗೂ ಇನ್ನೀತರ ಪತ್ರಿಕೆಗಳ ಪ್ರತಿನಿಧಿಗಳು ಮಾಸಾಶನ ಪಡೆಯಲು ಅರ್ಹತೆ ಹೊಂದಿರುವುದಿಲ್ಲವೆಂದು ಸ್ಪಷ್ಟವಾಗಿ ನಿಬಂಧನೆ ಹೊರಡಿಸಿರುವುದು ಕೂಡ ಕಾನೂನು ಬಾಹಿರ. ದಿನ ಪತ್ರಿಕೆಗಳ ರೀತಿಯಲ್ಲೇ ಇವರುನೂ Registrar of News Paper of India ವತಿಯಿಂದ ಪರವಾನಗೆ ಹೊಂದಿ ಪತ್ರಿಕೆಗಳನ್ನು ಹೊರತರುವ ಹಿನ್ನೆಲೆಯಲ್ಲಿ ಈ ಪ್ರತಿನಿಧಿಗಳಿಗೂ ಮಾಸಾಶನ ದೊರೆಯುವವರೆಗೂ ಧ್ವನಿ ವತಿಯಿಂದ ಹೋರಾಟ ನಿಲ್ಲೊಲ್ಲ. ಇನ್ನೂ ಮಾನ್ಯ ಸಿದ್ದರಾಮಯ್ಯನ ಸರ್ಕಾರ ರಾಜ್ಯಾಧ್ಯಂತ ಓಡಾಡಲು ಎರಡುವರೆ ಕೋಟಿ ಮಹಿಳೆಯರಿಗೆ,ವಿಧ್ಯಾರ್ಥಿನಿಯರಿಗೆ ಹಾಗೂ ಮಂಗಳಮುಖಿಯರಿಗೆ ಸೌಲಭ್ಯ ಒದಗಿಸಿರುವುದು ಸ್ವಾಗತಾರ್ಹ, ಆದರೆ ಕಳೆದ ಹಲವಾರು ವರ್ಷಗಳಿಂದ ಉಚಿತ ಬಸ್ ಪಾಸ್ ಗಾಗಿ ಹೋರಾಟ ನಡೆಸುತ್ತಾ ಮನವಿ ನೀಡಿದ್ದರೂ ಈ ಕುರಿತು ಕಾಳಜಿ ವಹಿಸದಿರುವುದು ದುರಾದೃಷ್ಟಕರ. ರಾಜ್ಯಾಧ್ಯಂತ ಬೇಡ ಕನಿಷ್ಠ ಜಿಲ್ಲಾ ವ್ಯಾಪ್ತಿಗಾದರೂ ಹತ್ತು ಸಾವಿರ ಪತ್ರಕರ್ತರಿಗೆ ಬಸ್ ಪಾಸ್ , ವಿಮಾ ಸೌಲಭ್ಯ ಹಾಗೂ ಮಜೀತಿಯಾ ವೇತನ ಮಂಡಳಿ ಆದೇಶದ ಅನುಷ್ಠಾನವನ್ನು ಕಾರ್ಮಿಕ ಆಯುಕ್ತರಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕಟ್ಟು ನಿಟ್ಟಾಗಿ ಜಾರಿಯಾಗುವಂತೆ ಸರ್ಕಾರ ಈ ಕೂಡಲೇ ಕ್ರಮವಹಿಸಿ ಸಂಕಷ್ಟ,ಸಾವು ಬದುಕಿನ ಮಧ್ಯ ಜೀವನ ಸಾಗಿಸುತ್ತಿರುವ ವರದಿಗಾರರಿಗೆ ಆಸರೆಯಾಗಲೇಬೇಕೆಂಬ ವಿನಮ್ರ ಮನವಿಯೊಂದಿಗೆ . ಈ ಮನವಿಯ ಜೊತೆ ಬೆಂಗಳೂರು ಪೋಲಿಸ್ ಇಲಾಖೆಯು ದಿನಾಂಕ:-14/8/2023 ರ ಪ್ರೀಡಂ ಪಾರ್ಕಾ ನಲ್ಲಿ ನಡೆಸುವ ಪ್ರತಿಭಟನೆಯ ಹೋರಾಟಕ್ಕೆ ಸಂಘಟನೆಗೆ ನೀಡಿರುವ ಅನುಮತಿ ಪತ್ರದ ಪ್ರತಿ. *ಬಂಗ್ಲೆ ಮಲ್ಲಿಕಾರ್ಜುನ,ರಾಜ್ಯಾಧ್ಯಕ್ಷರು,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ. ಮೋ:-9535290300* *ವಿಶೇಷ ಗಮನಕ್ಕೆ:-ಸಮಸ್ತ ನಾಡಿನ ಕಾನಿಪ ಧ್ವನಿ ಸಂಘಟನೆಯ ರಾಜ್ಯ, ಜಿಲ್ಲಾ ಹಾಗೂ ತಾಲೂಕಿನ ಪದಾಧಿಕಾರಿಗಳು ಮಾತ್ರ ಈ ಧರಣಿ ಪ್ರತಭಟನೆಯಲ್ಲಿ ಭಾಗಿಯಾಗಿ ನಮ್ಮ ಮೂಲಭೂತ ಹಕ್ಕಿಗಾಗಿ ಹೋರಾಡೋಣ. ಯಂದು ರಾಜ್ಯಾಧ್ಯಕ್ಷರಾದ್ ಬಂಗ್ಲೆ ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ...

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಕ್ಕೇರಿ : ಜುಲೈ 29 – ಹುಕ್ಕೇರಿ ತಾಲೂಕಿನ ಶಿಂದಿಹಟ್ಟಿ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಸುಟ್ಟು ಸುಮಾರು ₹25 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ. ರಾಮಪ್ಪ ಲಕ್ಷ್ಮಣ ಮಗದುಮ್ಮ ಅವರ ಮನೆಗೆ ಈ ದುರ್ಘಟನೆ ಸಂಭವಿಸಿದ್ದು, ಕುಟುಂಬ ಸಂಪೂರ್ಣವಾಗಿ ಬೀದಿಗೆ ಬಿದ್ದಿದೆ ಎಂದು ನೊಂದವರು ದೂರಿದ್ದಾರೆ.ಘಟನೆಯು ಸಂಭವಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬುದು ಸ್ಥಳೀಯರ ಆಕ್ರೋಶ. "ಇನ್ನಾದರೂ ಅಧಿಕಾರಿಗಳು ನೊಂದವರಿಗೆ ನೆರವಾಗಬೇಕು," ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ. ಕಾಂಬಳೆ ಅವರು ಖಂಡಿಸಿದ್ದಾರೆ.ಈ ವಿಚಾರ ತಿಳಿದ ಧ್ವನಿ ಸಂಘಟನೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಸ್ಥಳಕ್ಕೆ ತಕ್ಷಣ ದೌಡಾಯಿಸಿ ನೊಂದ ಕುಟುಂಬಕ್ಕೆ ದಿನಸಿ, ಬಟ್ಟೆ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಿಸಿ ಧೈರ್ಯ ತುಂಬಿದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ ಕಾಂಬಳೆ, ತಾಲೂಕಾ ಉಪಾಧ್ಯಕ್ಷ ಸಂತೋಷ ಪಾಟೀಲ, ಕಾರ್ಯದರ್ಶಿ ಶಾಂತಿನಾಥ ಮಗದುಮ್ಮ ಹಾಗೂ ಖಜಾಂಚಿ ಮಹಾಂತೇಶ ಬೇವಿಕಟ್ಟಿ ಉಪಸ್ಥಿತರಿದ್ದರು. ವರದಿ : ಸಂತೋಷ್ ಪಾಟೀಲ್, ಹುಕ್ಕೇರಿ.

ಹುಕ್ಕೇರಿ : ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮ ಪಂಚಾಯತ ಸಭಾ ಭವನ ಕಟ್ಟಡ ಉದ್ಘಾಟನಾ ಸಮಾರಂಭ ಜರಗಿತು 15ನೇ ಹಣಕಾಸು ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಗ್ರಾಮ ಪಂಚಾಯತ್ ಸಭಾ ಭವನ ಕಟ್ಟಡದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಹೈಷಿಕೇಶಾನಂದ ಬಾಬು ಮಹಾರಾಜರು ಮದಿಹಳ್ಳಿ ಹಾಗೂ ಶ್ರೀ ವಾಮನದೇವರು ಮದಿಹಳ್ಳಿ ಉದ್ಘಾಟಕರಾದ ಶ್ರೀ ಟಿ ಆರ್ ಮಲ್ಲಾಡದ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ್ ಪಂಚಾಯತ್ ಹುಕ್ಕೇರಿ ಹಾಗೂ ಶ್ರೀಮತಿ ಲಕ್ಕವ್ವ ಬಾಳಪ್ಪ ಬಾಗಿ ಅಧ್ಯಕ್ಷರು ಗ್ರಾಮ ಪಂಚಾಯತ ಮುದಿಹಳ್ಳಿ ಶ್ರೀಮತಿ ಕೋಮಲ ಬಸವರಾಜ್ ಹೊಸಮನಿ ಉಪಾಧ್ಯಕ್ಷರು ಹಾಗೂ ಶ್ರೀ ಸುರೇಶ್ ತಳವಾರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತ್ ಮದಿಹಳ್ಳಿ ಇವರ ಅಮೃತ ಹಸ್ತದಿಂದ ಉದ್ಘಾಟನಾ ಸಮಾರಂಭ ಜರುಗಿತು ಈ ಸಮಾರಂಭದಲ್ಲಿ ಶ್ರೀಮತಿ ಲಕ್ಕವ್ವಾ ಬಾಳಪ್ಪ ಬಾಗಿ ಅಧ್ಯಕ್ಷರು. ಸದಸ್ಯರಾದ ಹಸನ್ ರಾಜೇಸಾಬ್ ಸನದಿ. ಶ್ರೀ ಶಿವಾಜಿ ಶೆಟ್ಟೆಪ್ಪ ಗಾಡಿವಡ್ಡರ್. ಶ್ರೀ ಕಾಶಿನಾಥ್ ಓಮಣ್ಣಾ ಮುತಗಿ. ಸದ್ದಾಂ ಮಲಿಕ್ ಬಳಿಗಾರ. ಗಣಪತಿ ಮುರಾರಿ ವಾಳಕಿ. ಶ್ರೀಮತಿ ಶೋಭಾ ಶಿವಾನಂದ ಖಾನಾಪುರಿ. ಶ್ರೀಮತಿ ಶಂಕರವ್ವ ಬೋರಪ್ಪ ತಳವಾರ. ಶ್ರೀಧರ್ ಕಾಡಪ್ಪ ಚೌಗಲಾ. ಕೆಂಪಣ್ಣಾ ಚೌಗಲಾ. ಸತ್ಯಪ್ಪ ಶಿವಲಿಂಗ ಮಾದರ. ಗುರುಸಿದ್ಧ ಬಸವವಂತ ಹಿಡಕಲ್. ಶ್ರೀಮತಿ ದಾನಮ್ಮ ರಮೇಶ್ ಆಲಗೂರಿ. ಶ್ರೀಮತಿ ಶಿವಕ್ಕಾ ಪುಂಡಲೀಕ. ಶ್ರೀಮತಿ ಯಲ್ಲವ್ವ ಮಾರುತಿ ಕುರುಬರ. ರವೀಂದ್ರ ಬಾಬು ಚಾಗಲಾ. ಭೀಮ್ ಸೇನ್ ಬಾಗಿ.ಡಾ.ಕಾಡೇಶ ಹೊಸಮನಿ. ಅಂಬರೀಶ್ ಬನ್ನಕಗೋಳ. ಮಲ್ಲಿಕಾರ್ಜುನ್ ಗೋಟೂರಿ. ಸಂತೋಷ್ ಪಾಟೀಲ್. ಸದಾ ಬಾಗಿ. ಮಲ್ಲಪ್ಪ ಮಾಣಗಾವಿ. ಸುಲ್ತಾನ್ ಸನದಿ. ಶಿವಪ್ಪ ಮುತ್ತಗಿ. ಸಂಜು ಗಾಯಕವಾಡ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನಿ. ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಸಿಬ್ಬಂದಿ ವರ್ಗದವರು ಮದಿಹಳ್ಳಿ ಶಿರಗಾಂವ ಎಸ್ ಡಿ ಎಮ್ ಸಿ ಅಧ್ಯಕ್ಷರು ಸರ್ವ ಸದಸ್ಯರು ಮದಿಹಳ್ಳಿ ಮತ್ತು ಶಿರಗಾವ್ ಗ್ರಾಮದ ಊರಿನ ಗುರು ಹಿರಿಯರು ಮುಖಂಡರು ಮಹಿಳೆಯರು ಉಪಸ್ಥಿತರಿದ್ದರು. ವರದಿ : ಸಂತೋಷ ಪಾಟೀಲ್, ಹುಕ್ಕೇರಿ.

ರಾಯಬಾಗ : ಇಂದು ನಾವು 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. 1947 ರ ಆಗಸ್ಟ್ 15 ರಂದು ನಾವು ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದ ದಿನವನ್ನು ಸ್ಮರಿಸುತ್ತೇವೆ. ಈ ದಿನವನ್ನು ಆಚರಿಸುವಾಗ, ನಾವು ನಮ್ಮ ದೇಶಕ್ಕಾಗಿ ಹೋರಾಡಿದ ಎಲ್ಲ ಮಹಾನ್ ನಾಯಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿಕೊಳ್ಳುತ್ತೇವೆ.ಭಾರತವು ಒಂದು ಬೃಹತ್ ಮತ್ತು ವೈವಿಧ್ಯಮಯ ದೇಶ. ನಾವು ಅನೇಕ ಭಾಷೆಗಳು, ಸಂಸ್ಕೃತಿಗಳು ಮತ್ತು ಧರ್ಮಗಳನ್ನು ಹೊಂದಿದ್ದೇವೆ, ಆದರೆ ನಾವು ಒಂದೇ ರಾಷ್ಟ್ರದ ಭಾಗವಾಗಿದ್ದೇವೆ. ನಮ್ಮೆಲ್ಲರನ್ನೂ ಒಂದುಗೂಡಿಸುವ ಅಂಶವೆಂದರೆ ನಮ್ಮ ದೇಶದ ಮೇಲಿನ ಪ್ರೀತಿ ಮತ್ತು ಗೌರವ.ಸ್ವಾತಂತ್ರ್ಯವೆಂದರೆ ಕೇವಲ ರಾಜಕೀಯ ಸ್ವಾತಂತ್ರ್ಯವಲ್ಲ. ಇದು ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸ್ವಾತಂತ್ರ್ಯವನ್ನು ಒಳಗೊಂಡಿದೆ. ನಾವು ನಮ್ಮ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಶ್ರಮಿಸಬೇಕು. ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಶಾಖೆ ರಾಯಬಾಗ ಅಧ್ಯಕ್ಷರಾದ ಉಮೇಶ ಭೂಪಾಲ ಪೋಳ ಹೇಳಿದರು, ಅವರು ರಾಯಬಾಗ ಸರ್ಕಾರಿ ನೌಕರರ ಭವನದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಎಲ್ಲರಿಗೂ 79ನೇ ಸ್ವಾತಂತ್ರ್ಯ ದಿನಾಚರಣೆ ಶುಭಾಶಯಗಳು ತಿಳಿಸುತ್ತಾ ಮಾತನಾಡಿದರು, ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುರೇಶ್ ಕದ್ದು, ರಾಜ್ಯ ಪರಿಷತ್ ಸದಸ್ಯರಾದ ಮಲಿಕಜಾನ್ ಕೊರ್ಬು, ಸಂಘಟನಾ ಕಾರ್ಯದರ್ಶಿ ಕಲ್ಲಪ್ಪ ಗುಡಿಮನಿ, ನಾಮ ನಿರ್ದೇಶಿತ ನಿರ್ದೇಶಕರಾದ ಭಗವಂತ ಮಸಾಲಜಿ, ನಿಂಗಪ್ಪ ಬೀರಣಗಡ್ಡಿ, ಸದಾಶಿವ ಕಾಂಬಳೆ, ಪರಶುರಾಮ ಕುಂಬಾರ, ಸವಿತಾ ಜೋಲಾಪೂರೆ, ಮತ್ತಿತರು ಹಾಜರಿದ್ದರು.