ಗೋಕಾಕ : ವಿಶ್ವ ಅಂಚೆ ದಿನಾಚರಣೆ ನಿಮಿತ್ತ ನಗರದ ಪ್ರಧಾನ ಅಂಚೆ ಕಚೇರಿಯನ್ನು ತಳಿರು ತೋರಣಗಳಿಂದ ಅಲಂಕರಿಸಿ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು.ಅಂಚೆ ಅಧೀಕ್ಷಕರಾದ ಶ್ರೀ ಆರ್. ವಾಯ್. ಮದುಸಾಗರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ಭಾರತದಲ್ಲಿ ಪ್ರತಿವರ್ಷ ಅಂಚೆ ಸೇವೆಗಳ ಪಾತ್ರ ಮತ್ತು ಕಾರ್ಯಚಟುವಟಿಕೆಗಳ ಅರಿವು ಮೂಡಿಸಲು ಪ್ರತಿ ವರ್ಷ ಅಕ್ಟೋಬರ್ 9 ರಿಂದ ಅಕ್ಟೋಬರ್ 13 ರ ವರೆಗೆ ರಾಷ್ಟ್ರೀಯ ಅಂಚೆ ಸಪ್ತಾಹ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತಿದೆ. 1874 ರಲ್ಲಿ ಯುನಿವರ್ಸಲ್‌ ಪೋಸ್ಟಲ್‌ ಯೂನಿಯನ್ ಸ್ಥಾಪನೆಯ ನೆನಪಿಗಾಗಿ ೮.೧ ಅನ್ನು ವಿಶ್ವ ಪೋಸ್ಟ್ ದಿನವನ್ನಾಗಿ ಆಚರಿಸಲಾಗುತ್ತಿದೆ. 1969 ರಲ್ಲಿ ಜಪಾನ್‌ನ ಟೋಕಿಯೋದಲ್ಲಿ ಈ ದಿನವನ್ನು ವಿಶ್ವ ಅಂಚೆ ದಿನವನ್ನಾಗಿ ಘೋಷಿಸಲಾಯಿತು ಎಂದರು. ಹಾಗೇಯೆ ನಮ್ಮ ಭಾರತದಲ್ಲಿ ಪ್ರತಿವರ್ಷ ಅಂಚೆ ಸೇವೆಗಳ ಪಾತ್ರ ಮತ್ತು ಕಾರ್ಯಚಟುವಟಿಕೆಗಳ ಅರಿವು ಮೂಡಿಸಲು ಅಕ್ಟೋಬರ 9 ರಿಂದ ಅಕ್ಟೋಬರ 13 ರ ವರೆಗೆ ರಾಷ್ಟ್ರೀಯ ಅಂಚೆ ಸಪ್ತಾಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಸದ್ಯ ಎಲ್ಲ ಅಂಚೆ ಕಛೇರಿಗಳು ಆಧುನಿಕರಣಗೊಂಡಿದ್ದು ಪೋಸ್ಟ್ ಕಾರ್ಡ್ ಸೇವೆ, ಸಣ್ಣ ಉಳಿತಾಯ ಖಾತೆಗಳು, ಅಂಚೆ ಜೀವ ವಿಮೆ ಸೇವೆಗಳ ಜೊತೆಗೆ ಡಿಜಿಟಲಿಕರಣಗೊಂಡು ಇಬ್ಯಾಂಕಿಂಗ ಇಪೋಸ್ಸ, ಇ ಮನಿಆರ್ಡರ ಹಾಗೂ 2018 ರಲ್ಲಿ ಪರಚಯವಾದ ಇಂಡಿಯಾ ಪೋಸ್ಸ ಪೇಮೆಂಟಬ್ಯಾಂಕ, ಗ್ರಾಹಕರ ಯಾವುದೇ ಬ್ಯಾಂಕಿನಲ್ಲಿ ಇರುವಂತಹ ಹಣವನ್ನು ಆಧಾರ ಆದಾರಿತ ಹಣ ಪಾವತಿ ಮಾಡುವ ವಿಧಾನದ ಮೂಲಕ ಮನಯ ಮುಂದೆಯೆ ಎ.ಟಿ.ಎಮ್. ಸೇವೆಯನ್ನು ಒದಗಿಸಲಾಗುತ್ತಿದೆ ಈ ಸೇವೆಯನ್ನು ಎಲ್ಲರೂ ಪಡೆಯಬೇಕೆಂದು ಹೇಳಿದರು, ವಿದೇಶಗಳಿಗೆ ಪಾರ್ಸಲ್‌ ದಫ್ತು ಮಾಡುತ್ತಿರುವ ಉದ್ದಿಮೆದಾರರ ಅನುಕೂಲಕ್ಕಾಗಿ ಢಾಕ್ ನಿರ್ಯಾತ್ ಕೇಂದ್ರ ಎಂಬ ಹೊಸ ಸೇವೆಯನ್ನು ಆರಂಬಿಸಲಾಗಿದೆ. ಈ ಸೇವೆಯು ಅತೀ ಕಡಿಮೆ ದರದಲ್ಲಿ ವಿಶ್ವದಾದ್ಯಂತ ಉದ್ದಿಮೆದಾರರು ತಮ್ಮ ಉತ್ಪನ್ನಗಳನ್ನು ಸರಳ ಹಾಗೂ ವೇಗವಾಗಿ ರಫ್ತು ಮಾಡಬಹುದಾಗಿದೆ. ಪ್ರಾಮಾಣಿಕತೆ ಎಂಬ ಭದ್ರ ಬುನಾದಿಯ ಮೇಲೆ ನಿಂತಿರುವ ಅಂಚೆ ಇಲಾಖೆಯು, ಕಾಯಕವೇ ಕೈಲಾಸ ಎಂಬ ಧೈಯವನ್ನೋಳಗಂಡು ದೇಶದ ಮೂಲೆ ಮೂಲೆಗೂ ಬಡವ ಬಲ್ಲಿದರನ್ನದೆ, ವೃದ್ಧರು, ಅಶಕ್ತರು, ವಿಕಲಚೇತನರುಗಳ ಮನ ಮನ ಬಾಗಿಲಿಗೆ ಸೇವೆಯನ್ನು ಒದಗಿಸುತ್ತಿದೆ. ಕೋವಿಡ್ ಸಂದರ್ಭದಲ್ಲಿ ಇಲಾಖೆ ದಕ್ಷತೆಯಿಂದ ಕಾರ್ಯನಿರ್ವಹಿಸಿದ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪ್ರಧಾನ ಅಂಚೆಪಾಲಕರಾದ ಶ್ರೀಮತಿ ಜಿ. ಆರ್. ದಾವನಿ, ಅಂಚನಿರೀಕ್ಷರಾದ ಶ್ರೀ ಶಿವಮೂರ್ತಿ ಹುಳಿಬುತ್ತಿ, ಎಸ್. ಎಸ್. ಪರೀಟ ಹಾಗೂ ಎಲ್ಲ ಅಂಚೆ ಅಣ್ಣಂದಿರು ಹಾಜರಿದ್ದರು..

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಕ್ಕೇರಿ : ಜುಲೈ 29 – ಹುಕ್ಕೇರಿ ತಾಲೂಕಿನ ಶಿಂದಿಹಟ್ಟಿ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಸುಟ್ಟು ಸುಮಾರು ₹25 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ. ರಾಮಪ್ಪ ಲಕ್ಷ್ಮಣ ಮಗದುಮ್ಮ ಅವರ ಮನೆಗೆ ಈ ದುರ್ಘಟನೆ ಸಂಭವಿಸಿದ್ದು, ಕುಟುಂಬ ಸಂಪೂರ್ಣವಾಗಿ ಬೀದಿಗೆ ಬಿದ್ದಿದೆ ಎಂದು ನೊಂದವರು ದೂರಿದ್ದಾರೆ.ಘಟನೆಯು ಸಂಭವಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬುದು ಸ್ಥಳೀಯರ ಆಕ್ರೋಶ. "ಇನ್ನಾದರೂ ಅಧಿಕಾರಿಗಳು ನೊಂದವರಿಗೆ ನೆರವಾಗಬೇಕು," ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ. ಕಾಂಬಳೆ ಅವರು ಖಂಡಿಸಿದ್ದಾರೆ.ಈ ವಿಚಾರ ತಿಳಿದ ಧ್ವನಿ ಸಂಘಟನೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಸ್ಥಳಕ್ಕೆ ತಕ್ಷಣ ದೌಡಾಯಿಸಿ ನೊಂದ ಕುಟುಂಬಕ್ಕೆ ದಿನಸಿ, ಬಟ್ಟೆ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಿಸಿ ಧೈರ್ಯ ತುಂಬಿದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ ಕಾಂಬಳೆ, ತಾಲೂಕಾ ಉಪಾಧ್ಯಕ್ಷ ಸಂತೋಷ ಪಾಟೀಲ, ಕಾರ್ಯದರ್ಶಿ ಶಾಂತಿನಾಥ ಮಗದುಮ್ಮ ಹಾಗೂ ಖಜಾಂಚಿ ಮಹಾಂತೇಶ ಬೇವಿಕಟ್ಟಿ ಉಪಸ್ಥಿತರಿದ್ದರು. ವರದಿ : ಸಂತೋಷ್ ಪಾಟೀಲ್, ಹುಕ್ಕೇರಿ.

ಹುಕ್ಕೇರಿ : ಮಾದಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಒಂದೇ ದಿನದಲ್ಲಿ ಎರಡೆರಡು ಕಾರ್ಯಕ್ರಮ ಗಳನ್ನು ನಡೆಸಿ ಸಮಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿರುವ ಮದಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳು,ಸಿಬ್ಬಂದಿ ವರ್ಗ ಸರ್ವ ಸದಸ್ಯ ಮಂಡಳಿ ಮೊದಲನೆಯದ್ದು "ಜಮಾಬಂದಿ ಕಾರ್ಯಕ್ರಮ" ಎರಡನೆಯದು "ಕಾವಲು ಸಮಿತಿ ಸಭೆ" ಹೀಗೆ ಹಲವಾರು ಕಾರ್ಯಕ್ರಮಗಳನ್ನು ಮಾಡಿ ಮದಿಹಳ್ಳಿ ಗ್ರಾಮವನ್ನು ಅಭಿವೃದ್ಧಿಯ ಹಾದಿಯತ್ತ ಕರೆದೊಯ್ಯಲು ಶ್ರಮಿಸುತ್ತಿರುವ ಮಾದಿಹಳ್ಳಿ ಗ್ರಾಮ ಪಂಚಾಯತ ಆಡಳಿತ ಮಂಡಳಿ ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ತಳವಾರ, ಅಧ್ಯಕ್ಷರಾದ ಲಕ್ಕವ್ವ ಬಾಗಿ, ಉಪಾಧ್ಯಕ್ಷರಾದ ಕೋಮಲ್ ಹೊಸಮನಿ, ಪಶು ವೈದ್ಯಾಧಿಕಾರಿ ರಮೇಶ್ ಕದಮ, ಅಂಗನವಾಡಿ ಮೇಲ್ವಿಚಾರಕರು ಜಿ. ಎನ್. ಮಾನಗಾವಿ, ಸದಸ್ಯರಾದ ಮಾನಿಕ ಬಾಗಿ, ಗಣಪತಿ ವಾಳಕಿ, ಕಾಶಪ್ಪ ಮುತಗಿ, ಶಿವಾಜಿ ಗಾಡಿವಡ್ಡರ, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ವರದಿ : ಸಂತೋಷ ಪಾಟೀಲ್, ಹುಕ್ಕೇರಿ.

ಹುಕ್ಕೇರಿ : ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮ ಪಂಚಾಯತ ಸಭಾ ಭವನ ಕಟ್ಟಡ ಉದ್ಘಾಟನಾ ಸಮಾರಂಭ ಜರಗಿತು 15ನೇ ಹಣಕಾಸು ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಗ್ರಾಮ ಪಂಚಾಯತ್ ಸಭಾ ಭವನ ಕಟ್ಟಡದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಹೈಷಿಕೇಶಾನಂದ ಬಾಬು ಮಹಾರಾಜರು ಮದಿಹಳ್ಳಿ ಹಾಗೂ ಶ್ರೀ ವಾಮನದೇವರು ಮದಿಹಳ್ಳಿ ಉದ್ಘಾಟಕರಾದ ಶ್ರೀ ಟಿ ಆರ್ ಮಲ್ಲಾಡದ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ್ ಪಂಚಾಯತ್ ಹುಕ್ಕೇರಿ ಹಾಗೂ ಶ್ರೀಮತಿ ಲಕ್ಕವ್ವ ಬಾಳಪ್ಪ ಬಾಗಿ ಅಧ್ಯಕ್ಷರು ಗ್ರಾಮ ಪಂಚಾಯತ ಮುದಿಹಳ್ಳಿ ಶ್ರೀಮತಿ ಕೋಮಲ ಬಸವರಾಜ್ ಹೊಸಮನಿ ಉಪಾಧ್ಯಕ್ಷರು ಹಾಗೂ ಶ್ರೀ ಸುರೇಶ್ ತಳವಾರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತ್ ಮದಿಹಳ್ಳಿ ಇವರ ಅಮೃತ ಹಸ್ತದಿಂದ ಉದ್ಘಾಟನಾ ಸಮಾರಂಭ ಜರುಗಿತು ಈ ಸಮಾರಂಭದಲ್ಲಿ ಶ್ರೀಮತಿ ಲಕ್ಕವ್ವಾ ಬಾಳಪ್ಪ ಬಾಗಿ ಅಧ್ಯಕ್ಷರು. ಸದಸ್ಯರಾದ ಹಸನ್ ರಾಜೇಸಾಬ್ ಸನದಿ. ಶ್ರೀ ಶಿವಾಜಿ ಶೆಟ್ಟೆಪ್ಪ ಗಾಡಿವಡ್ಡರ್. ಶ್ರೀ ಕಾಶಿನಾಥ್ ಓಮಣ್ಣಾ ಮುತಗಿ. ಸದ್ದಾಂ ಮಲಿಕ್ ಬಳಿಗಾರ. ಗಣಪತಿ ಮುರಾರಿ ವಾಳಕಿ. ಶ್ರೀಮತಿ ಶೋಭಾ ಶಿವಾನಂದ ಖಾನಾಪುರಿ. ಶ್ರೀಮತಿ ಶಂಕರವ್ವ ಬೋರಪ್ಪ ತಳವಾರ. ಶ್ರೀಧರ್ ಕಾಡಪ್ಪ ಚೌಗಲಾ. ಕೆಂಪಣ್ಣಾ ಚೌಗಲಾ. ಸತ್ಯಪ್ಪ ಶಿವಲಿಂಗ ಮಾದರ. ಗುರುಸಿದ್ಧ ಬಸವವಂತ ಹಿಡಕಲ್. ಶ್ರೀಮತಿ ದಾನಮ್ಮ ರಮೇಶ್ ಆಲಗೂರಿ. ಶ್ರೀಮತಿ ಶಿವಕ್ಕಾ ಪುಂಡಲೀಕ. ಶ್ರೀಮತಿ ಯಲ್ಲವ್ವ ಮಾರುತಿ ಕುರುಬರ. ರವೀಂದ್ರ ಬಾಬು ಚಾಗಲಾ. ಭೀಮ್ ಸೇನ್ ಬಾಗಿ.ಡಾ.ಕಾಡೇಶ ಹೊಸಮನಿ. ಅಂಬರೀಶ್ ಬನ್ನಕಗೋಳ. ಮಲ್ಲಿಕಾರ್ಜುನ್ ಗೋಟೂರಿ. ಸಂತೋಷ್ ಪಾಟೀಲ್. ಸದಾ ಬಾಗಿ. ಮಲ್ಲಪ್ಪ ಮಾಣಗಾವಿ. ಸುಲ್ತಾನ್ ಸನದಿ. ಶಿವಪ್ಪ ಮುತ್ತಗಿ. ಸಂಜು ಗಾಯಕವಾಡ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನಿ. ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಸಿಬ್ಬಂದಿ ವರ್ಗದವರು ಮದಿಹಳ್ಳಿ ಶಿರಗಾಂವ ಎಸ್ ಡಿ ಎಮ್ ಸಿ ಅಧ್ಯಕ್ಷರು ಸರ್ವ ಸದಸ್ಯರು ಮದಿಹಳ್ಳಿ ಮತ್ತು ಶಿರಗಾವ್ ಗ್ರಾಮದ ಊರಿನ ಗುರು ಹಿರಿಯರು ಮುಖಂಡರು ಮಹಿಳೆಯರು ಉಪಸ್ಥಿತರಿದ್ದರು. ವರದಿ : ಸಂತೋಷ ಪಾಟೀಲ್, ಹುಕ್ಕೇರಿ.