ರಮೇಶ ಕತ್ತಿ ಕಾಂಗ್ರೆಸ್​ಗೆ ಬರುವುದಾದರೆ ನಾನು ಸ್ವಾಗತಿಸುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಬೇಕೆನ್ನುವ ಕುರಿತು ಕಾಂಗ್ರೆಸ್ ಮುಖಂಡರೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಸಭೆ ನಡೆಸಿ ಚರ್ಚಿಸಿದರು.ಚಿಕ್ಕೋಡಿ: ಬಿಜೆಪಿ ಟಿಕೆಟ್ ವಂಚಿತರಾದ ರಮೇಶ್ ಕತ್ತಿ ಅವರು ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ ನಾನು ಸ್ವಾಗತಿಸುತ್ತೇನೆ ಎಂದು ಬೆಳಗಾವಿ ಜಿಲ್ಲೆಯ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ಹಂಚಿಕೆ ಮಾಡಬೇಕು ಎಂಬ ನಿಟ್ಟಿನಲ್ಲಿ ಕೈ ಮುಖಂಡರ ಸಭೆ ನಡೆಸಿ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ರಮೇಶ್ ಕತ್ತಿ ಕಾಂಗ್ರೆಸ್ ಪಕ್ಷಕ್ಕೆ ಬಂದ್ರೆ ಸ್ವಾಗತ ಮಾಡುತ್ತೇವೆ ಹಾಗೂ ಅವರ ಆಗಮನದ ಬಗ್ಗೆ ಕಾರ್ಯಕರ್ತರ ಸಭೆ ನಡೆಸುತ್ತಿದ್ದೇವೆ ಎಂದು ಹೇಳಿದರು.ನಾಯಕರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ: ಈ ಭಾಗದ ಸೂಕ್ತ ಅಭ್ಯರ್ಥಿಗಳ ಬಗ್ಗೆ ಅಥಣಿ ಶಾಸಕ ಲಕ್ಷ್ಮಣ ಸವದಿ, ವಿಧಾನಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಕಾಗವಾಡ ಶಾಸಕ ರಾಜು ಕಾಗೆ ಸೇರಿದಂತೆ ಚಿಕ್ಕೋಡಿ ಭಾಗದ ನಾಯಕರ ಅಭಿಪ್ರಾಯ ಪಡೆಯಲು ಸಭೆ ನಡೆಸುತ್ತಿದ್ದೇವೆ. ರಮೇಶ್ ಕತ್ತಿ ಅವರೊಂದಿಗೆ ಈವರೆಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಮಾತುಕತೆ ಆಗಿಲ್ಲ. ರಮೇಶ್ ಕತ್ತಿ ಜೊತೆಗೆ ಯಾರೇ ಪಕ್ಷಕ್ಕೆ ಬಂದ್ರು ನಾನು ಸ್ವಾಗತ ಮಾಡುತ್ತೇವೆ, ನಮ್ಮ ನಡೆ ಗೆಲ್ಲುವ ಕಡೆ ಇದೆ ಎಂದು ತಿಳಿಸಿದರು.ಪ್ರಿಯಾಂಕಾ ಜಾರಕಿಹೊಳಿ ಸ್ಪರ್ಧೆ ಪೈನಲ್ ಆಗಿಲ್ಲ: ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿ ಲೋಕಸಭೆಗೆ ಚುನಾವಣೆಗೆ ನಿಲ್ಲಿಸುವ ವಿಚಾರವಾಗಿ ಕಾರ್ಯಕರ್ತರು ಹಾಗೂ ನಾಯಕರ ಸಭೆ ಮಾಡುತ್ತಿದ್ದೇವೆ. ಅಂತಿಮ ಹಂತದ ಅಭ್ಯರ್ಥಿ ಆಯ್ಕೆ ಕುರಿತು ನಮ್ಮ ನಾಯಕರ ಸಭೆ ಮಾಡುತ್ತಿದ್ದೇನೆ. ಇಂದು ಮತ್ತು ನಾಳೆ ಎರಡು ದಿನ ಸಭೆ ಮಾಡುತ್ತೇನೆ ಎಂದರು.8 ಕ್ಷೇತ್ರದ ಹಾಲಿ ಮಾಜಿ ಶಾಸಕರ ಅಭಿಪ್ರಾಯ ಸಂಗ್ರಹ ಮಾಡುತ್ತೇನೆ. ಪ್ರಿಯಂಕಾ ಆಗಿರಬಹುದು ಅಥವಾ ಬೇರೆ ಅಭ್ಯರ್ಥಿ ಆಗಿರಬಹುದು ಎಲ್ಲರ ಅಭಿಪ್ರಾಯ ಪಡೆದು ಮುಂದಿನ ಅಭಿಪ್ರಾಯ ಹೈಕಮಾಂಡ್​ಗೆ ರವಾನೆ ಮಾಡುತ್ತೇವೆ. ಮುಂದಿನ ನಿರ್ಧಾರವನ್ನು ಹೈಕಮಾಂಡ್ ಮಾಡಲಿದೆ. ಪ್ರಿಯಾಂಕಾ ಜಾರಕಿಹೊಳಿ ಸ್ಪರ್ಧೆ ಇದುವರೆಗೂ ಫೈನಲ್ ಆಗಿಲ್ಲ. ಚಿಕ್ಕೋಡಿ ವ್ಯಾಪ್ತಿಯ ಕಾರ್ಯಕರ್ತರ ಒಪ್ಪಿಗೆ ಬಳಿಕ ಅಂತಿಮ ನಿರ್ಧಾರವನ್ನು ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು. ವರದಿ : ಸಂತೋಷ್ ಪಾಟೀಲ್ ಚಿಕ್ಕೋಡಿ,

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಕ್ಕೇರಿ : ಜುಲೈ 29 – ಹುಕ್ಕೇರಿ ತಾಲೂಕಿನ ಶಿಂದಿಹಟ್ಟಿ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಸುಟ್ಟು ಸುಮಾರು ₹25 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ. ರಾಮಪ್ಪ ಲಕ್ಷ್ಮಣ ಮಗದುಮ್ಮ ಅವರ ಮನೆಗೆ ಈ ದುರ್ಘಟನೆ ಸಂಭವಿಸಿದ್ದು, ಕುಟುಂಬ ಸಂಪೂರ್ಣವಾಗಿ ಬೀದಿಗೆ ಬಿದ್ದಿದೆ ಎಂದು ನೊಂದವರು ದೂರಿದ್ದಾರೆ.ಘಟನೆಯು ಸಂಭವಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬುದು ಸ್ಥಳೀಯರ ಆಕ್ರೋಶ. "ಇನ್ನಾದರೂ ಅಧಿಕಾರಿಗಳು ನೊಂದವರಿಗೆ ನೆರವಾಗಬೇಕು," ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ. ಕಾಂಬಳೆ ಅವರು ಖಂಡಿಸಿದ್ದಾರೆ.ಈ ವಿಚಾರ ತಿಳಿದ ಧ್ವನಿ ಸಂಘಟನೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಸ್ಥಳಕ್ಕೆ ತಕ್ಷಣ ದೌಡಾಯಿಸಿ ನೊಂದ ಕುಟುಂಬಕ್ಕೆ ದಿನಸಿ, ಬಟ್ಟೆ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಿಸಿ ಧೈರ್ಯ ತುಂಬಿದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ ಕಾಂಬಳೆ, ತಾಲೂಕಾ ಉಪಾಧ್ಯಕ್ಷ ಸಂತೋಷ ಪಾಟೀಲ, ಕಾರ್ಯದರ್ಶಿ ಶಾಂತಿನಾಥ ಮಗದುಮ್ಮ ಹಾಗೂ ಖಜಾಂಚಿ ಮಹಾಂತೇಶ ಬೇವಿಕಟ್ಟಿ ಉಪಸ್ಥಿತರಿದ್ದರು. ವರದಿ : ಸಂತೋಷ್ ಪಾಟೀಲ್, ಹುಕ್ಕೇರಿ.

ಹುಕ್ಕೇರಿ : ಮಾದಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಒಂದೇ ದಿನದಲ್ಲಿ ಎರಡೆರಡು ಕಾರ್ಯಕ್ರಮ ಗಳನ್ನು ನಡೆಸಿ ಸಮಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿರುವ ಮದಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳು,ಸಿಬ್ಬಂದಿ ವರ್ಗ ಸರ್ವ ಸದಸ್ಯ ಮಂಡಳಿ ಮೊದಲನೆಯದ್ದು "ಜಮಾಬಂದಿ ಕಾರ್ಯಕ್ರಮ" ಎರಡನೆಯದು "ಕಾವಲು ಸಮಿತಿ ಸಭೆ" ಹೀಗೆ ಹಲವಾರು ಕಾರ್ಯಕ್ರಮಗಳನ್ನು ಮಾಡಿ ಮದಿಹಳ್ಳಿ ಗ್ರಾಮವನ್ನು ಅಭಿವೃದ್ಧಿಯ ಹಾದಿಯತ್ತ ಕರೆದೊಯ್ಯಲು ಶ್ರಮಿಸುತ್ತಿರುವ ಮಾದಿಹಳ್ಳಿ ಗ್ರಾಮ ಪಂಚಾಯತ ಆಡಳಿತ ಮಂಡಳಿ ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ತಳವಾರ, ಅಧ್ಯಕ್ಷರಾದ ಲಕ್ಕವ್ವ ಬಾಗಿ, ಉಪಾಧ್ಯಕ್ಷರಾದ ಕೋಮಲ್ ಹೊಸಮನಿ, ಪಶು ವೈದ್ಯಾಧಿಕಾರಿ ರಮೇಶ್ ಕದಮ, ಅಂಗನವಾಡಿ ಮೇಲ್ವಿಚಾರಕರು ಜಿ. ಎನ್. ಮಾನಗಾವಿ, ಸದಸ್ಯರಾದ ಮಾನಿಕ ಬಾಗಿ, ಗಣಪತಿ ವಾಳಕಿ, ಕಾಶಪ್ಪ ಮುತಗಿ, ಶಿವಾಜಿ ಗಾಡಿವಡ್ಡರ, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ವರದಿ : ಸಂತೋಷ ಪಾಟೀಲ್, ಹುಕ್ಕೇರಿ.

ಹುಕ್ಕೇರಿ : ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮ ಪಂಚಾಯತ ಸಭಾ ಭವನ ಕಟ್ಟಡ ಉದ್ಘಾಟನಾ ಸಮಾರಂಭ ಜರಗಿತು 15ನೇ ಹಣಕಾಸು ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಗ್ರಾಮ ಪಂಚಾಯತ್ ಸಭಾ ಭವನ ಕಟ್ಟಡದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಹೈಷಿಕೇಶಾನಂದ ಬಾಬು ಮಹಾರಾಜರು ಮದಿಹಳ್ಳಿ ಹಾಗೂ ಶ್ರೀ ವಾಮನದೇವರು ಮದಿಹಳ್ಳಿ ಉದ್ಘಾಟಕರಾದ ಶ್ರೀ ಟಿ ಆರ್ ಮಲ್ಲಾಡದ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ್ ಪಂಚಾಯತ್ ಹುಕ್ಕೇರಿ ಹಾಗೂ ಶ್ರೀಮತಿ ಲಕ್ಕವ್ವ ಬಾಳಪ್ಪ ಬಾಗಿ ಅಧ್ಯಕ್ಷರು ಗ್ರಾಮ ಪಂಚಾಯತ ಮುದಿಹಳ್ಳಿ ಶ್ರೀಮತಿ ಕೋಮಲ ಬಸವರಾಜ್ ಹೊಸಮನಿ ಉಪಾಧ್ಯಕ್ಷರು ಹಾಗೂ ಶ್ರೀ ಸುರೇಶ್ ತಳವಾರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತ್ ಮದಿಹಳ್ಳಿ ಇವರ ಅಮೃತ ಹಸ್ತದಿಂದ ಉದ್ಘಾಟನಾ ಸಮಾರಂಭ ಜರುಗಿತು ಈ ಸಮಾರಂಭದಲ್ಲಿ ಶ್ರೀಮತಿ ಲಕ್ಕವ್ವಾ ಬಾಳಪ್ಪ ಬಾಗಿ ಅಧ್ಯಕ್ಷರು. ಸದಸ್ಯರಾದ ಹಸನ್ ರಾಜೇಸಾಬ್ ಸನದಿ. ಶ್ರೀ ಶಿವಾಜಿ ಶೆಟ್ಟೆಪ್ಪ ಗಾಡಿವಡ್ಡರ್. ಶ್ರೀ ಕಾಶಿನಾಥ್ ಓಮಣ್ಣಾ ಮುತಗಿ. ಸದ್ದಾಂ ಮಲಿಕ್ ಬಳಿಗಾರ. ಗಣಪತಿ ಮುರಾರಿ ವಾಳಕಿ. ಶ್ರೀಮತಿ ಶೋಭಾ ಶಿವಾನಂದ ಖಾನಾಪುರಿ. ಶ್ರೀಮತಿ ಶಂಕರವ್ವ ಬೋರಪ್ಪ ತಳವಾರ. ಶ್ರೀಧರ್ ಕಾಡಪ್ಪ ಚೌಗಲಾ. ಕೆಂಪಣ್ಣಾ ಚೌಗಲಾ. ಸತ್ಯಪ್ಪ ಶಿವಲಿಂಗ ಮಾದರ. ಗುರುಸಿದ್ಧ ಬಸವವಂತ ಹಿಡಕಲ್. ಶ್ರೀಮತಿ ದಾನಮ್ಮ ರಮೇಶ್ ಆಲಗೂರಿ. ಶ್ರೀಮತಿ ಶಿವಕ್ಕಾ ಪುಂಡಲೀಕ. ಶ್ರೀಮತಿ ಯಲ್ಲವ್ವ ಮಾರುತಿ ಕುರುಬರ. ರವೀಂದ್ರ ಬಾಬು ಚಾಗಲಾ. ಭೀಮ್ ಸೇನ್ ಬಾಗಿ.ಡಾ.ಕಾಡೇಶ ಹೊಸಮನಿ. ಅಂಬರೀಶ್ ಬನ್ನಕಗೋಳ. ಮಲ್ಲಿಕಾರ್ಜುನ್ ಗೋಟೂರಿ. ಸಂತೋಷ್ ಪಾಟೀಲ್. ಸದಾ ಬಾಗಿ. ಮಲ್ಲಪ್ಪ ಮಾಣಗಾವಿ. ಸುಲ್ತಾನ್ ಸನದಿ. ಶಿವಪ್ಪ ಮುತ್ತಗಿ. ಸಂಜು ಗಾಯಕವಾಡ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನಿ. ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಸಿಬ್ಬಂದಿ ವರ್ಗದವರು ಮದಿಹಳ್ಳಿ ಶಿರಗಾಂವ ಎಸ್ ಡಿ ಎಮ್ ಸಿ ಅಧ್ಯಕ್ಷರು ಸರ್ವ ಸದಸ್ಯರು ಮದಿಹಳ್ಳಿ ಮತ್ತು ಶಿರಗಾವ್ ಗ್ರಾಮದ ಊರಿನ ಗುರು ಹಿರಿಯರು ಮುಖಂಡರು ಮಹಿಳೆಯರು ಉಪಸ್ಥಿತರಿದ್ದರು. ವರದಿ : ಸಂತೋಷ ಪಾಟೀಲ್, ಹುಕ್ಕೇರಿ.