ಬರ ಪರಿಸ್ಥಿತಿ ಹಳ್ಳಿಗರ ಗೋಳು ಕೇಳೋರಿಲ್ಲ, ಕೂಲಿಕಾರರಿಗೆ ಖಾತ್ರಿ ಯಾಗದ ಉದ್ಯೋಗ, ವಲಸೆ ಹೋಗುವ ಸಂಭವ,- ನೀತಿ ಸಂಹಿತೆ ಮಾದರಿ. ಒಂದು ಕಡೆ ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಮಾದರಿ ಕಂಡು ಬಂದರೆ ಇನ್ನೊಂದು ಕಡೆ ಗ್ರಾಮದ ಚುಕ್ಕಾಣಿ ಹೊಣೆ ಹೊತ್ತಿರುವ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಗಳಿಗೆ ಹಲವು ಕರ್ತವ್ಯ ಮತ್ತು ಜವಾಬ್ದಾರಿಗಳು ಹೆಗಲಿರಿಕೊಂಡಿವೆ. ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಅಧಿಕಾರ ಇದ್ದು ಇಲ್ಲದಂತಾಗಿದೆ ಪ್ರಸ್ತುತ ಎದುರಾಗಿರುವ ಭೀಕರ ಬರದ ಪರಿಸ್ಥಿತಿಯು ಸೇರಿದಂತೆ ಹಳ್ಳಿಗಳಲ್ಲಿ ಆಡಳಿತದ ನಿರ್ವಹಣೆಗೆ ತೊಂದರೆಯಾಗುತ್ತಿರುವ ದೂರುಗಳು ಕೇಳಿ ಬರುತ್ತಿವೆ. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 14 ತಾಲೂಕುಗಳು ಒಟ್ಟು 500 ಗ್ರಾಮ ಪಂಚಾಯಿತಿಗಳು ಇವೆ ಈ ಮೇಲಿನ ಅಂದ್ರೆ 500 ಪಂಚಾಯಿತಿಗಳ ಪೈಕಿ 453 ಕಡೆಗಳಲ್ಲಿ ಪಿಡಿಒ ಕಾರ್ಯ ನಿರ್ವಹಿಸುತ್ತಿದ್ದು ಉಳಿದವುಗಳು ಖಾಲಿ ಸ್ಥಾನಗಳಾಗಿವೆ, 6 ಜನ ಪಿಡಿಒ ಗಳು ಸಚಿವರು ಮತ್ತು ಶಾಸಕರ ಆಪ್ತ ಸಹಾಯಕರಾಗಿ ನಿಯೋಜನೆಗೊಂಡಿದ್ದಾರೆ. ಕೆಲವು ಪಿಡಿಓ ಗಳು ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿಗಳಲ್ಲಿ ವಿವಿಧ ಹುದ್ದೆಗಳಿಗೆ ಬಡ್ತಿ ಹೊಂದಿದ್ದಾರೆ. ಇದರ ನಡುವೆ ಅಂತರ ಜಿಲ್ಲೆಯ ನಿಯೋಜನೆಯ ಮೂಲಕ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಗೊಂಡವರು ಸಹ ಇದ್ದಾರೆ.ಕೆಲವು ಪಂಚಾಯತಿಗಳಲ್ಲಿ ಕಾಯಮ್ಮಾತಿ ಪಿಡಿಒಗಳನ್ನು ಹೊಂದಿದ್ದು ಒಂದು ಖುಷಿಯ ವಿಷಯ ಕೆಲ ಪಂಚಾಯಿತಿಗಳಲ್ಲಿ ಖಾಯಂ ಪಿಡಿಓಗಳ ಕೊರತೆ ಇರುವುದು ಒಂದು ವಿಷಾದನೀಯ ಸಂಗತಿ ಹಾಗೂ ಒಬ್ಬ ಪಿಡಿಒ ಗೆ ಎರಡು ಮೂರು ಗ್ರಾಮ ಪಂಚಾಯಿತಿಗಳ ಆಡಳಿತ ಚಿಕ್ಕಾಣಿಯ ಜವಾಬ್ದಾರಿ ಹಾಗೂ ಕರ್ತವ್ಯಗಳನ್ನು ವಹಿಸಲಾಗಿದೆ ಇವುಗಳ ಮಧ್ಯೆ ಲೋಕಸಭೆಯ ಚುನಾವಣೆಯ ಕಾರ್ಯಗಳಿಗೆ ವಿವಿಧ ವಿಭಾಗಗಳಲ್ಲಿ ಎರಡು ತಿಂಗಳ ಕಾಲ ನಿರಂತರ ಕರ್ತವ್ಯಕ್ಕಾಗಿ ನಿಯೋಜನೆಗೊಳಿಸಿದ್ದು ಗ್ರಾಮ ಪಂಚಾಯಿತಿ ನಿರ್ವಹಣೆಯ ಮೇಲೆ ನೇರ ಪರಿಣಾಮ ಬೀರಿ ಅಭಿವೃದ್ಧಿಗೆ ಹೊಡೆತ ಬಿದ್ದಂತಾಗಿದೆ. ಚುನಾವಣೆಯ SST, FST,VST, VVT, ತಂಡಗಳಲ್ಲಿ ಪೀಡಿಒ ಗಳನ್ನ ತೊಡಗಿಸಿಕೊಂಡಿರುವುದರಿಂದ ಹಳ್ಳಿಗಳಲ್ಲಿ ಬರಗಾಲ ಎದುರಿಸುವ ಕಾರ್ಯಕ್ಕೆ ಹಿನ್ನಡೆಯಾಗಿದೆ ಜನ ಧನ ಕರುಗಳಿಗೆ ನೀರು ಪೂರೈಸಲು ತೊಂದರೆಯಾಗುತ್ತಿದೆ ಅದಲ್ಲದೆ ಉದ್ಯೋಗ ಅಕುಶಲ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡುವ ಕಾರ್ಯಕ್ಕೂ ಹಿನ್ನಡೆಯಾಗಿದೆ ದುಡಿಯೋ ಕೈಗಳಿಗೆ ಕೆಲಸ ಇಲ್ಲದಂತಾಗಿದೆ ಇದರಿಂದ ದುಡಿಯುವ ಕೂಲಿಕಾರ್ ವರ್ಗ ವಲಸೆ ಹೋಗುವ ಸಂದರ್ಭ ಬಂದಿದೆ ಮತ್ತು ಮತ ಕಡಿಮೆಯಾಗುವ ಸಾಧ್ಯತೆ ಇದೆ. ಮತದಾನ ಮತ್ತು ಮತ ಎಣಿಕೆಗೆ ಮಾತ್ರ ಪಿಡಿಒಗಳನ್ನು ಬಳಸಬೇಕು ಎನ್ನುವ ಅಭಿಪ್ರಾಯಗಳಿವೆ ಹಾವೇರಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪಿಡಿಒಗಳ ನಿಯೋಜನೆಯನ್ನು ಹಿಂತೆಗೆದುಕೊಳ್ಳಲು ಇತರ ಬೇರೆ ಇಲಾಖೆ ಸಿಬ್ಬಂದಿಗೆ ಜಾಗಕ್ಕೆ ಒತ್ತಾಯಗಳು ಕೇಳಿ ಬರುತ್ತಿದೆ .ಈ ಮೂಲಕ ಭೀಕರ ಬರಗಾಲ ಎದುರಿಸಲು ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಹೊಣೆ ಜಿಲ್ಲಾ ಆಡಳಿತದ ಮೇಲಿದೆ. ಗ್ರಾಮ ಪಂಚಾಯಿತಿಗಳಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕಾದರೆ ಪಿಡಿಓ ಅಗತ್ಯ ಅದಾಗಿಯೂ ಒಬ್ಬ ಪಿಡಿಒ ಗ್ ಎರಡು - ಮೂರು ಕಡೆ ಜವಾಬ್ದಾರಿ ಇದ್ದು ವಾರದಲ್ಲಿ ಒಂದೆರಡು ದಿನ ಮಾತ್ರ ಕಾರ್ಯಾಲಯದಲ್ಲಿ ಲಭ್ಯವಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಇದರಿಂದ ಆಡಳಿತದ ವ್ಯವಸ್ಥೆಯನ್ನು ಬಲಗೊಳಿಸಲು ಸಾಧ್ಯವಾಗುತ್ತಿಲ್ಲ. ಇವು ಹಲವು ಗ್ರಾಮ ಪಂಚಾಯಿತಿಗಳು ಎದುರಿಸುತ್ತಿರುವ ಸಮಸ್ಯೆಯಾಗಿವೆ. ಬರಗಾಲದ ಸಮಸ್ಯೆ ಎದುರಾಗಿದೆ ಜಲ ಮೂಲಗಳು ಬತ್ತಿ ಹೋಗಿವೆ ನೀರು ಪೂರೈಕೆಯಲ್ಲಿ ವ್ಯಥೆಯ ಉಂಟಾಗಿದೆ. ಜನರು ಪಿಡಿಒ ಗಳಿಗೆ ಜನರು ವಿಚಾರಿಸಬೇಕೆಂದರೆ ಸಂಪರ್ಕಕ್ಕೆ ಸಿಗುತ್ತಿಲ್ಲ ಸದಸ್ಯರು ಹಾಗೂ ಸಾರ್ವಜನಿಕರು ಪಿಡಿಒ ಗಳನ್ನೂ ಹುಡುಕುತ್ತಿದ್ದಾರೆ. ವರದಿ :- ರಮೇಶ ಕಾಂಬಳೆ,

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಕ್ಕೇರಿ : ಜುಲೈ 29 – ಹುಕ್ಕೇರಿ ತಾಲೂಕಿನ ಶಿಂದಿಹಟ್ಟಿ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಸುಟ್ಟು ಸುಮಾರು ₹25 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ. ರಾಮಪ್ಪ ಲಕ್ಷ್ಮಣ ಮಗದುಮ್ಮ ಅವರ ಮನೆಗೆ ಈ ದುರ್ಘಟನೆ ಸಂಭವಿಸಿದ್ದು, ಕುಟುಂಬ ಸಂಪೂರ್ಣವಾಗಿ ಬೀದಿಗೆ ಬಿದ್ದಿದೆ ಎಂದು ನೊಂದವರು ದೂರಿದ್ದಾರೆ.ಘಟನೆಯು ಸಂಭವಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬುದು ಸ್ಥಳೀಯರ ಆಕ್ರೋಶ. "ಇನ್ನಾದರೂ ಅಧಿಕಾರಿಗಳು ನೊಂದವರಿಗೆ ನೆರವಾಗಬೇಕು," ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ. ಕಾಂಬಳೆ ಅವರು ಖಂಡಿಸಿದ್ದಾರೆ.ಈ ವಿಚಾರ ತಿಳಿದ ಧ್ವನಿ ಸಂಘಟನೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಸ್ಥಳಕ್ಕೆ ತಕ್ಷಣ ದೌಡಾಯಿಸಿ ನೊಂದ ಕುಟುಂಬಕ್ಕೆ ದಿನಸಿ, ಬಟ್ಟೆ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಿಸಿ ಧೈರ್ಯ ತುಂಬಿದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ ಕಾಂಬಳೆ, ತಾಲೂಕಾ ಉಪಾಧ್ಯಕ್ಷ ಸಂತೋಷ ಪಾಟೀಲ, ಕಾರ್ಯದರ್ಶಿ ಶಾಂತಿನಾಥ ಮಗದುಮ್ಮ ಹಾಗೂ ಖಜಾಂಚಿ ಮಹಾಂತೇಶ ಬೇವಿಕಟ್ಟಿ ಉಪಸ್ಥಿತರಿದ್ದರು. ವರದಿ : ಸಂತೋಷ್ ಪಾಟೀಲ್, ಹುಕ್ಕೇರಿ.

ಹುಕ್ಕೇರಿ : ಮಾದಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಒಂದೇ ದಿನದಲ್ಲಿ ಎರಡೆರಡು ಕಾರ್ಯಕ್ರಮ ಗಳನ್ನು ನಡೆಸಿ ಸಮಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿರುವ ಮದಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳು,ಸಿಬ್ಬಂದಿ ವರ್ಗ ಸರ್ವ ಸದಸ್ಯ ಮಂಡಳಿ ಮೊದಲನೆಯದ್ದು "ಜಮಾಬಂದಿ ಕಾರ್ಯಕ್ರಮ" ಎರಡನೆಯದು "ಕಾವಲು ಸಮಿತಿ ಸಭೆ" ಹೀಗೆ ಹಲವಾರು ಕಾರ್ಯಕ್ರಮಗಳನ್ನು ಮಾಡಿ ಮದಿಹಳ್ಳಿ ಗ್ರಾಮವನ್ನು ಅಭಿವೃದ್ಧಿಯ ಹಾದಿಯತ್ತ ಕರೆದೊಯ್ಯಲು ಶ್ರಮಿಸುತ್ತಿರುವ ಮಾದಿಹಳ್ಳಿ ಗ್ರಾಮ ಪಂಚಾಯತ ಆಡಳಿತ ಮಂಡಳಿ ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ತಳವಾರ, ಅಧ್ಯಕ್ಷರಾದ ಲಕ್ಕವ್ವ ಬಾಗಿ, ಉಪಾಧ್ಯಕ್ಷರಾದ ಕೋಮಲ್ ಹೊಸಮನಿ, ಪಶು ವೈದ್ಯಾಧಿಕಾರಿ ರಮೇಶ್ ಕದಮ, ಅಂಗನವಾಡಿ ಮೇಲ್ವಿಚಾರಕರು ಜಿ. ಎನ್. ಮಾನಗಾವಿ, ಸದಸ್ಯರಾದ ಮಾನಿಕ ಬಾಗಿ, ಗಣಪತಿ ವಾಳಕಿ, ಕಾಶಪ್ಪ ಮುತಗಿ, ಶಿವಾಜಿ ಗಾಡಿವಡ್ಡರ, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ವರದಿ : ಸಂತೋಷ ಪಾಟೀಲ್, ಹುಕ್ಕೇರಿ.

ಹುಕ್ಕೇರಿ : ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮ ಪಂಚಾಯತ ಸಭಾ ಭವನ ಕಟ್ಟಡ ಉದ್ಘಾಟನಾ ಸಮಾರಂಭ ಜರಗಿತು 15ನೇ ಹಣಕಾಸು ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಗ್ರಾಮ ಪಂಚಾಯತ್ ಸಭಾ ಭವನ ಕಟ್ಟಡದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಹೈಷಿಕೇಶಾನಂದ ಬಾಬು ಮಹಾರಾಜರು ಮದಿಹಳ್ಳಿ ಹಾಗೂ ಶ್ರೀ ವಾಮನದೇವರು ಮದಿಹಳ್ಳಿ ಉದ್ಘಾಟಕರಾದ ಶ್ರೀ ಟಿ ಆರ್ ಮಲ್ಲಾಡದ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ್ ಪಂಚಾಯತ್ ಹುಕ್ಕೇರಿ ಹಾಗೂ ಶ್ರೀಮತಿ ಲಕ್ಕವ್ವ ಬಾಳಪ್ಪ ಬಾಗಿ ಅಧ್ಯಕ್ಷರು ಗ್ರಾಮ ಪಂಚಾಯತ ಮುದಿಹಳ್ಳಿ ಶ್ರೀಮತಿ ಕೋಮಲ ಬಸವರಾಜ್ ಹೊಸಮನಿ ಉಪಾಧ್ಯಕ್ಷರು ಹಾಗೂ ಶ್ರೀ ಸುರೇಶ್ ತಳವಾರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತ್ ಮದಿಹಳ್ಳಿ ಇವರ ಅಮೃತ ಹಸ್ತದಿಂದ ಉದ್ಘಾಟನಾ ಸಮಾರಂಭ ಜರುಗಿತು ಈ ಸಮಾರಂಭದಲ್ಲಿ ಶ್ರೀಮತಿ ಲಕ್ಕವ್ವಾ ಬಾಳಪ್ಪ ಬಾಗಿ ಅಧ್ಯಕ್ಷರು. ಸದಸ್ಯರಾದ ಹಸನ್ ರಾಜೇಸಾಬ್ ಸನದಿ. ಶ್ರೀ ಶಿವಾಜಿ ಶೆಟ್ಟೆಪ್ಪ ಗಾಡಿವಡ್ಡರ್. ಶ್ರೀ ಕಾಶಿನಾಥ್ ಓಮಣ್ಣಾ ಮುತಗಿ. ಸದ್ದಾಂ ಮಲಿಕ್ ಬಳಿಗಾರ. ಗಣಪತಿ ಮುರಾರಿ ವಾಳಕಿ. ಶ್ರೀಮತಿ ಶೋಭಾ ಶಿವಾನಂದ ಖಾನಾಪುರಿ. ಶ್ರೀಮತಿ ಶಂಕರವ್ವ ಬೋರಪ್ಪ ತಳವಾರ. ಶ್ರೀಧರ್ ಕಾಡಪ್ಪ ಚೌಗಲಾ. ಕೆಂಪಣ್ಣಾ ಚೌಗಲಾ. ಸತ್ಯಪ್ಪ ಶಿವಲಿಂಗ ಮಾದರ. ಗುರುಸಿದ್ಧ ಬಸವವಂತ ಹಿಡಕಲ್. ಶ್ರೀಮತಿ ದಾನಮ್ಮ ರಮೇಶ್ ಆಲಗೂರಿ. ಶ್ರೀಮತಿ ಶಿವಕ್ಕಾ ಪುಂಡಲೀಕ. ಶ್ರೀಮತಿ ಯಲ್ಲವ್ವ ಮಾರುತಿ ಕುರುಬರ. ರವೀಂದ್ರ ಬಾಬು ಚಾಗಲಾ. ಭೀಮ್ ಸೇನ್ ಬಾಗಿ.ಡಾ.ಕಾಡೇಶ ಹೊಸಮನಿ. ಅಂಬರೀಶ್ ಬನ್ನಕಗೋಳ. ಮಲ್ಲಿಕಾರ್ಜುನ್ ಗೋಟೂರಿ. ಸಂತೋಷ್ ಪಾಟೀಲ್. ಸದಾ ಬಾಗಿ. ಮಲ್ಲಪ್ಪ ಮಾಣಗಾವಿ. ಸುಲ್ತಾನ್ ಸನದಿ. ಶಿವಪ್ಪ ಮುತ್ತಗಿ. ಸಂಜು ಗಾಯಕವಾಡ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನಿ. ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಸಿಬ್ಬಂದಿ ವರ್ಗದವರು ಮದಿಹಳ್ಳಿ ಶಿರಗಾಂವ ಎಸ್ ಡಿ ಎಮ್ ಸಿ ಅಧ್ಯಕ್ಷರು ಸರ್ವ ಸದಸ್ಯರು ಮದಿಹಳ್ಳಿ ಮತ್ತು ಶಿರಗಾವ್ ಗ್ರಾಮದ ಊರಿನ ಗುರು ಹಿರಿಯರು ಮುಖಂಡರು ಮಹಿಳೆಯರು ಉಪಸ್ಥಿತರಿದ್ದರು. ವರದಿ : ಸಂತೋಷ ಪಾಟೀಲ್, ಹುಕ್ಕೇರಿ.