ಚಿಕ್ಕೋಡಿ : ಇಚಲಕರಂಜಿ ಹೋಗುವಾಗ ಚಿಂಚಣಿ ಗ್ರಾಮದ ಹತ್ತಿರವಿರುವ, ಹಳ್ಳದ ಮೇಲ್ಸೇತುವೆಯ ಮೇಲೆ ಹಾಗೂ ರಸ್ತೆಯ ಮೇಲೆ, ಬ್ರಹತ್ತಾಕಾರದ ಹುಂಡಿಗಳು ಬಿದ್ದಿವೆ, ಮೇಲ್ಸೇತುವಿಗೆ ತಡೆಗೋಡಿಯೂ ಸಹ ಇರುವುದಿಲ್ಲ, ಹಳ್ಳವು ತುಂಬಿ ಹರಿಯುತ್ತಲಿದೆ, ಸಾವಿರಾರು ಶಾಲಾ ಮಕ್ಕಳು, ನಾಗರಿಕರು, ವಾಹನಧಾರಕರು ಇಂತಹ ಅಪಾಯದ ಸ್ಥಿತಿಯಲ್ಲಿಯೇ ಸಂಚರಿಸುತ್ತಿದ್ದಾರೆ, ಯಾವುದಾದರೂ ಅನಾಹುತವಾಗುವ ಮುಂಚೆ, ರಸ್ತೆ ಮತ್ತು ಮೇಲ್ಸೇತುವೆಯ ದುರುಸ್ತಿ ಕಾರ್ಯವಾಗಬೇಕೆಂದು, ಚಿಂಚಣಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಶನಿವಾರ ದಿ : 03-08-2024 ರಂದು ಮುಂಜಾನೆ 10:30 ಕ್ಕೆ ಸೇತುವೆಯ ಮೇಲೆ ಪ್ರತಿಭಟನೆ ಮಾಡಿದರು, ರಸ್ತೆ ತಡೆಗಟ್ಟಿ ಕೆಲಕಾಲ ಸಂಚಾರ ಬಂದ ಮಾಡಿ ಸರಕಾರಿ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ವಿರುದ್ಧವಾಗಿ ಘೋಷನೆ ಕೂಗಿದರು, ಸ್ಥಳಕ್ಕೆ ಚಿಕ್ಕೋಡಿಯ ಪಿ ಎಸ್ ಆಯ್ ಬಸಗೌಡಾ ನೇರ್ಲಿ ಇವರು ತಮ್ಮ ತಂಡದೊಂದಿಗೆ ಆಗಮಿಸಿ ಯಾವುದೇ ತರದ ಅಹಿತಕರ ಘಟನೆಗಳಾಗದಂತೆ ಸೂಕ್ತ ಭದ್ರತೆ ಒದಗಿಸಿದರು, ಸ್ಥಳಕ್ಕೆ ಚಿಕ್ಕೋಡಿ ಉಪವಿಭಾಗಾಧಿಕಾರಿಗಳು ಬರಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದು ರಸ್ತೆ ಮಧ್ಯದಲ್ಲಿಯೇ ಕುಳಿತುಕೊಂಡರು, ಚಿಂಚಣಿ ಗ್ರಾಮ ಪಂಚಾಯತ ಅಧ್ಯಕ್ಷ ಲಕ್ಷ್ಮಣ ಡಂಗೇರ ಮಾತನಾಡಿ, ಚಿಂಚಣಿ ಬಸ್ ನಿಲ್ದಾಣದಿಂದ ಊರಿನ ಆಚೆಯವರೆಗೆ ದೊಡ್ಡ ದೊಡ್ಡ ಹೊಂಡಗಳು ರಸ್ತೆ ಮಧ್ಯದಲ್ಲಿಯೇ ಬಿದ್ದಿವೆ, ಜನರು ಮಕ್ಕಳು ಸಂಚರಿಸುವುದು ತುಂಬಾ ಅಪಾಯಕಾರಿಯಾಗಿದೆ, ಜನರಿಗೆ ಮೂಲಭೂತ ಸೌಕರ್ಯಗಳಲ್ಲಿಯ ಒಂದಾದ ಸರಿಯಾದ ರಸ್ತೆ ಇಲ್ಲವಾದರೆ ಜನರ ಗತಿ ಏನು ? ಎಂದು ಕೇಳಿದರು, ಚಿಕ್ಕೋಡಿ ಉಪವಿಭಾಗಾಧಿಕಾರಿಗಳಾದ ಸುಭಾಷ ಸಂಪಗಾವಿ ಇವರು ಕೆಲ ಸಮಯದಲ್ಲಿ ಸ್ಥಳಕ್ಕೆ ಭೆಟ್ಟಿ ನೀಡಿ ಪರಿಶೀಲಿಸಿ ಪರಿಸ್ಥಿತಿಯ ಬಗ್ಗೆ ಅರ್ಥ ಮಾಡಿಕೊಂಡರು, ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ಈ ರಸ್ತೆ ಕಾಮಗಾರಿಯಾಗಿ ಬಹಳ ಸಮಯಗಳು ಆಗಿಲ್ಲ ತುಂಬಾ ಕಳಪೆ ಮಟ್ಟದ್ದಾಗಿದೆ, ಸರಕಾರ ರಸ್ತೆಗಳ ನಿರ್ವಹಣೆಗೆ ಹಣ ನೀಡುತ್ತದೆ ಆದರೆ ಈ ರಸ್ತೆಯ ನಿರ್ವಹಣೆ ಏಕೆ ಆಗಿಲ್ಲ ? ಎಂಬುದನ್ನು ಪರಿಶಿಲಿಸಿ ತಪ್ಪಿತಸ್ಥರ ಮೇಲೆ ಕ್ರಮ ಆಗಬೇಕೆಂದು ಒತ್ತಾಯಿಸಿದರು, ಮನವಿ ಸ್ವೀಕರಿಸಿ ಮಾತನಾಡಿದ ಎ.ಸಿ. ಸಾಹೇಬರು ಕೂಡಲೇ ರಸ್ತೆ ದುರುಸ್ತಿ ಕಾಮಗಾರಿಗಾಗಿ ಸಂಭಂಧಿತ ಅಧಿಕಾರಿಗಳಿಗೆ ಸೂಚಿಸಿ ನಾಲ್ಕು ದಿವಸಗಳಲ್ಲಿ ತಮ್ಮನ್ನು ತೊಂದರೆ ಮುಕ್ತಗೊಳಿಸುತ್ತೇವೆ ಕೂಡಲೇ ಪ್ರತಿಭಟನೆಯನ್ನು ಹಿಂಪಡೆಯಬೇಕೆಂದು ಸೂಚಿಸಿದರು. ನಂತರ ಪ್ರತಿಭಟನಾಕಾರರು ಒಂದು ವಾರದ ಒಳಗೆ ಕೆಲಸ-ಕಾರ್ಯಗಳು ಆಗಬೇಕು, ಇದಕ್ಕೆ ತಪ್ಪಿದಲ್ಲಿ ನಿಪ್ಪಾಣಿ-ಮುಧೋಳ ಮಾರ್ಗವನ್ನು ತಡೆದು ಉಗ್ರ ಹೋರಾಟ ಮಾಡಲಾಗುವುದು ಎಂದು ಹೇಳಿ ಪ್ರತಿಭಟನೆಯನ್ನು ಮುಕ್ತಗೊಳಿಸಿದರು.**ಈ ಸಂಧರ್ಭದಲ್ಲಿ ಸುಭಾಷ ಚೌಗಲಾ, ಭೀಮಗೌಡಾ ಚೊಂಚಣ್ಣವರ, ಚಂದ್ರಕಾಂತ ಹುಕ್ಕೇರಿ, ಸಂಜು ಬಡಿಗೇರ, ರುದ್ರಯ್ಯಾ ಹಿರೇಮಠ, ಸೌರಭ ಪಾಟೀಲ, ಲಕ್ಷ್ಮಣ ಡಂಗೇರ, ಸಂತೋಷ ಮಾಳಗೆ, ಸಚೀನ ಪರೀಟ, ಆಕಾಶ ಮುದ್ದಪ್ಪಗೋಳ, ಚನ್ನಯ್ಯಾ ಮಠಪತಿ, ದೀಪಕ ಮುದ್ದಪ್ಪಗೋಳ, ತಮ್ಮಣ್ಣಾ ನಿಲಜಗಿ, ಸಮೀರ ನಾಯಿಕ, ಅನೀಲಗೌಡಾ ಪಾಟೀಲ, ರಾಮಗೌಡಾ ಧರಣಗುತ್ತಿ ಹಾಗೂ ನೂರಾರು ಸಂಖ್ಯೆಯಲ್ಲಿ ಚಿಂಚಣಿಯ ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ :ಎಸ್ ಕಾಂಬಳೆ, ಚಿಕ್ಕೋಡಿ.

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಕ್ಕೇರಿ : ಜುಲೈ 29 – ಹುಕ್ಕೇರಿ ತಾಲೂಕಿನ ಶಿಂದಿಹಟ್ಟಿ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಸುಟ್ಟು ಸುಮಾರು ₹25 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ. ರಾಮಪ್ಪ ಲಕ್ಷ್ಮಣ ಮಗದುಮ್ಮ ಅವರ ಮನೆಗೆ ಈ ದುರ್ಘಟನೆ ಸಂಭವಿಸಿದ್ದು, ಕುಟುಂಬ ಸಂಪೂರ್ಣವಾಗಿ ಬೀದಿಗೆ ಬಿದ್ದಿದೆ ಎಂದು ನೊಂದವರು ದೂರಿದ್ದಾರೆ.ಘಟನೆಯು ಸಂಭವಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬುದು ಸ್ಥಳೀಯರ ಆಕ್ರೋಶ. "ಇನ್ನಾದರೂ ಅಧಿಕಾರಿಗಳು ನೊಂದವರಿಗೆ ನೆರವಾಗಬೇಕು," ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ. ಕಾಂಬಳೆ ಅವರು ಖಂಡಿಸಿದ್ದಾರೆ.ಈ ವಿಚಾರ ತಿಳಿದ ಧ್ವನಿ ಸಂಘಟನೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಸ್ಥಳಕ್ಕೆ ತಕ್ಷಣ ದೌಡಾಯಿಸಿ ನೊಂದ ಕುಟುಂಬಕ್ಕೆ ದಿನಸಿ, ಬಟ್ಟೆ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಿಸಿ ಧೈರ್ಯ ತುಂಬಿದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ ಕಾಂಬಳೆ, ತಾಲೂಕಾ ಉಪಾಧ್ಯಕ್ಷ ಸಂತೋಷ ಪಾಟೀಲ, ಕಾರ್ಯದರ್ಶಿ ಶಾಂತಿನಾಥ ಮಗದುಮ್ಮ ಹಾಗೂ ಖಜಾಂಚಿ ಮಹಾಂತೇಶ ಬೇವಿಕಟ್ಟಿ ಉಪಸ್ಥಿತರಿದ್ದರು. ವರದಿ : ಸಂತೋಷ್ ಪಾಟೀಲ್, ಹುಕ್ಕೇರಿ.

ಹುಕ್ಕೇರಿ : ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮ ಪಂಚಾಯತ ಸಭಾ ಭವನ ಕಟ್ಟಡ ಉದ್ಘಾಟನಾ ಸಮಾರಂಭ ಜರಗಿತು 15ನೇ ಹಣಕಾಸು ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಗ್ರಾಮ ಪಂಚಾಯತ್ ಸಭಾ ಭವನ ಕಟ್ಟಡದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಹೈಷಿಕೇಶಾನಂದ ಬಾಬು ಮಹಾರಾಜರು ಮದಿಹಳ್ಳಿ ಹಾಗೂ ಶ್ರೀ ವಾಮನದೇವರು ಮದಿಹಳ್ಳಿ ಉದ್ಘಾಟಕರಾದ ಶ್ರೀ ಟಿ ಆರ್ ಮಲ್ಲಾಡದ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ್ ಪಂಚಾಯತ್ ಹುಕ್ಕೇರಿ ಹಾಗೂ ಶ್ರೀಮತಿ ಲಕ್ಕವ್ವ ಬಾಳಪ್ಪ ಬಾಗಿ ಅಧ್ಯಕ್ಷರು ಗ್ರಾಮ ಪಂಚಾಯತ ಮುದಿಹಳ್ಳಿ ಶ್ರೀಮತಿ ಕೋಮಲ ಬಸವರಾಜ್ ಹೊಸಮನಿ ಉಪಾಧ್ಯಕ್ಷರು ಹಾಗೂ ಶ್ರೀ ಸುರೇಶ್ ತಳವಾರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತ್ ಮದಿಹಳ್ಳಿ ಇವರ ಅಮೃತ ಹಸ್ತದಿಂದ ಉದ್ಘಾಟನಾ ಸಮಾರಂಭ ಜರುಗಿತು ಈ ಸಮಾರಂಭದಲ್ಲಿ ಶ್ರೀಮತಿ ಲಕ್ಕವ್ವಾ ಬಾಳಪ್ಪ ಬಾಗಿ ಅಧ್ಯಕ್ಷರು. ಸದಸ್ಯರಾದ ಹಸನ್ ರಾಜೇಸಾಬ್ ಸನದಿ. ಶ್ರೀ ಶಿವಾಜಿ ಶೆಟ್ಟೆಪ್ಪ ಗಾಡಿವಡ್ಡರ್. ಶ್ರೀ ಕಾಶಿನಾಥ್ ಓಮಣ್ಣಾ ಮುತಗಿ. ಸದ್ದಾಂ ಮಲಿಕ್ ಬಳಿಗಾರ. ಗಣಪತಿ ಮುರಾರಿ ವಾಳಕಿ. ಶ್ರೀಮತಿ ಶೋಭಾ ಶಿವಾನಂದ ಖಾನಾಪುರಿ. ಶ್ರೀಮತಿ ಶಂಕರವ್ವ ಬೋರಪ್ಪ ತಳವಾರ. ಶ್ರೀಧರ್ ಕಾಡಪ್ಪ ಚೌಗಲಾ. ಕೆಂಪಣ್ಣಾ ಚೌಗಲಾ. ಸತ್ಯಪ್ಪ ಶಿವಲಿಂಗ ಮಾದರ. ಗುರುಸಿದ್ಧ ಬಸವವಂತ ಹಿಡಕಲ್. ಶ್ರೀಮತಿ ದಾನಮ್ಮ ರಮೇಶ್ ಆಲಗೂರಿ. ಶ್ರೀಮತಿ ಶಿವಕ್ಕಾ ಪುಂಡಲೀಕ. ಶ್ರೀಮತಿ ಯಲ್ಲವ್ವ ಮಾರುತಿ ಕುರುಬರ. ರವೀಂದ್ರ ಬಾಬು ಚಾಗಲಾ. ಭೀಮ್ ಸೇನ್ ಬಾಗಿ.ಡಾ.ಕಾಡೇಶ ಹೊಸಮನಿ. ಅಂಬರೀಶ್ ಬನ್ನಕಗೋಳ. ಮಲ್ಲಿಕಾರ್ಜುನ್ ಗೋಟೂರಿ. ಸಂತೋಷ್ ಪಾಟೀಲ್. ಸದಾ ಬಾಗಿ. ಮಲ್ಲಪ್ಪ ಮಾಣಗಾವಿ. ಸುಲ್ತಾನ್ ಸನದಿ. ಶಿವಪ್ಪ ಮುತ್ತಗಿ. ಸಂಜು ಗಾಯಕವಾಡ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನಿ. ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಸಿಬ್ಬಂದಿ ವರ್ಗದವರು ಮದಿಹಳ್ಳಿ ಶಿರಗಾಂವ ಎಸ್ ಡಿ ಎಮ್ ಸಿ ಅಧ್ಯಕ್ಷರು ಸರ್ವ ಸದಸ್ಯರು ಮದಿಹಳ್ಳಿ ಮತ್ತು ಶಿರಗಾವ್ ಗ್ರಾಮದ ಊರಿನ ಗುರು ಹಿರಿಯರು ಮುಖಂಡರು ಮಹಿಳೆಯರು ಉಪಸ್ಥಿತರಿದ್ದರು. ವರದಿ : ಸಂತೋಷ ಪಾಟೀಲ್, ಹುಕ್ಕೇರಿ.

ರಾಯಬಾಗ : ಇಂದು ನಾವು 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. 1947 ರ ಆಗಸ್ಟ್ 15 ರಂದು ನಾವು ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದ ದಿನವನ್ನು ಸ್ಮರಿಸುತ್ತೇವೆ. ಈ ದಿನವನ್ನು ಆಚರಿಸುವಾಗ, ನಾವು ನಮ್ಮ ದೇಶಕ್ಕಾಗಿ ಹೋರಾಡಿದ ಎಲ್ಲ ಮಹಾನ್ ನಾಯಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿಕೊಳ್ಳುತ್ತೇವೆ.ಭಾರತವು ಒಂದು ಬೃಹತ್ ಮತ್ತು ವೈವಿಧ್ಯಮಯ ದೇಶ. ನಾವು ಅನೇಕ ಭಾಷೆಗಳು, ಸಂಸ್ಕೃತಿಗಳು ಮತ್ತು ಧರ್ಮಗಳನ್ನು ಹೊಂದಿದ್ದೇವೆ, ಆದರೆ ನಾವು ಒಂದೇ ರಾಷ್ಟ್ರದ ಭಾಗವಾಗಿದ್ದೇವೆ. ನಮ್ಮೆಲ್ಲರನ್ನೂ ಒಂದುಗೂಡಿಸುವ ಅಂಶವೆಂದರೆ ನಮ್ಮ ದೇಶದ ಮೇಲಿನ ಪ್ರೀತಿ ಮತ್ತು ಗೌರವ.ಸ್ವಾತಂತ್ರ್ಯವೆಂದರೆ ಕೇವಲ ರಾಜಕೀಯ ಸ್ವಾತಂತ್ರ್ಯವಲ್ಲ. ಇದು ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸ್ವಾತಂತ್ರ್ಯವನ್ನು ಒಳಗೊಂಡಿದೆ. ನಾವು ನಮ್ಮ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಶ್ರಮಿಸಬೇಕು. ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಶಾಖೆ ರಾಯಬಾಗ ಅಧ್ಯಕ್ಷರಾದ ಉಮೇಶ ಭೂಪಾಲ ಪೋಳ ಹೇಳಿದರು, ಅವರು ರಾಯಬಾಗ ಸರ್ಕಾರಿ ನೌಕರರ ಭವನದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಎಲ್ಲರಿಗೂ 79ನೇ ಸ್ವಾತಂತ್ರ್ಯ ದಿನಾಚರಣೆ ಶುಭಾಶಯಗಳು ತಿಳಿಸುತ್ತಾ ಮಾತನಾಡಿದರು, ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುರೇಶ್ ಕದ್ದು, ರಾಜ್ಯ ಪರಿಷತ್ ಸದಸ್ಯರಾದ ಮಲಿಕಜಾನ್ ಕೊರ್ಬು, ಸಂಘಟನಾ ಕಾರ್ಯದರ್ಶಿ ಕಲ್ಲಪ್ಪ ಗುಡಿಮನಿ, ನಾಮ ನಿರ್ದೇಶಿತ ನಿರ್ದೇಶಕರಾದ ಭಗವಂತ ಮಸಾಲಜಿ, ನಿಂಗಪ್ಪ ಬೀರಣಗಡ್ಡಿ, ಸದಾಶಿವ ಕಾಂಬಳೆ, ಪರಶುರಾಮ ಕುಂಬಾರ, ಸವಿತಾ ಜೋಲಾಪೂರೆ, ಮತ್ತಿತರು ಹಾಜರಿದ್ದರು.