ವಿಷಯಕ್ಕೆ ಹೋಗಿ
ಹುಕ್ಕೇರಿ : ತಾಲೂಕಿನ ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕೇರಿ ಪೊಲೀಸ್ ಠಾಣೆ ಪಿ ಐಸ್ ಐ ಅವರನ್ನ ಅಮಾನತ್ತು ಮಾಡಿ ಬೆಳಗಾವಿ ಎಸ್ ಪಿ ಭೀಮಾಶಂಕರ ಗುಳೇದ ಆದೇಶ ಹೊರಡಿಸಿದ್ದಾರೆ.ಜೂನ್ 26 ರಂದು ಗೋವು ಸಾಗಿಸುತ್ತಿದ್ದ ವಾಹನ ಹಿಡಿದು ಠಾಣೆಗೆ ತಂದಿದ್ದ ಶ್ರೀರಾಮ ಸೇನೆ ಕಾರ್ಯಕರ್ತರು ಈ ವೇಳೆ ಕೇಸ್ ದಾಖಲಿಸದೇ ಬಿಟ್ಟು ಕಳ್ಳಿದ್ದ ಪಿ ಎಸ್ ಐ. ಘಟನೆ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರದೇ ಬೇಜವಾಬ್ದಾರಿ ತೋರಿದ್ದು ಹಾಗೂ ಗಡಿಪಾರಾದ ರೌಡಿ ಶೀಟರ್ ಶ್ರೀರಾಮ ಸೇನೆ ಕಾರ್ಯಕರ್ತ ಮಹಾವೀರ್ ಸೊಲ್ಲಾಪುರೆಯನ್ನ ಕೂಡ ಬಿಟ್ಟು ಕಳುಹಿಸಿದ ಅಂಶಗಳನ್ನ ಪರಿಗಣಿಸಿ ಅಮಾನತು ಮಾಡಲಾಗಿದೆ.ಜುಲೈ 3 ರಂದು ಇಂಗಳಿ ಚಲೋ ಕರೆ ಕೊಟ್ಟಿರುವ ಶ್ರೀರಾಮ ಸೇನೆ ಸಂಘಟನೆ ಪ್ರತಿಭಟನೆಗೂ ಮುನ್ನ ಪಿ ಎಸ್ ಐ ಅಮಾನತು ಮಾಡಿ ಬೆಳಗಾವಿ ಎಸ್ ಪಿ ಆದೇಶ ಹೊರಡಿಸಿದ್ದಾರೆ.ಶ್ರೀರಾಮ ಸೇನೆ ಕಾರ್ಯಕರ್ತರು ಗೋವು ಸಮೇತ ಠಾಣೆಗೆ ಹೋಗಿದ್ದರೂ ಎಫ್ ಐ ಆರ್ ಮಾಡದೇ ಬಿಟ್ಟು ಕಳ್ಳಿ ನಿರ್ಲಕ್ಷ್ಯ ತೋರಿದ ಹುಕ್ಕೇರಿ ಪೊಲೀಸ್ ಠಾಣೆ ಪಿ ಎಸ್ ಐ ನಿಖಿಲ್ ಕಾಂಬ್ಳೆ ಅಮಾನತು ಮಾಡಿ ಎಸ್ಪಿ ಭೀಮಾಶಂಕರ್ ಗುಳೇದ್ ಆದೇಶ ಹೊರಡಿಸಿದ್ದಾರೆ.. ವರದಿ :ಸಂತೋಷ ಪಾಟೀಲ ಹುಕ್ಕೇರಿ.
ಈ ಬ್ಲಾಗ್ನ ಜನಪ್ರಿಯ ಪೋಸ್ಟ್ಗಳು