ಬೆಳಗಾವಿ : ಬೆಳಗಾವಿಯಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಸಿಡಿದಿದ್ದ ಪತ್ರಕರ್ತರು, ನಿಷ್ಠಾವಂತ ಪತ್ರಕರ್ತರ ಹಕ್ಕುಗಳ ರಕ್ಷಣೆಗೆ ಧ್ವನಿ ಎತ್ತಿದರು.ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಸನ್ಮಾನ ನೀಡಿ ಸತ್ಕರಿಸಲಾಯಿತು. ಸಭೆಯ ಬಳಿಕ ಮಾತನಾಡಿದ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ ಕಾಂಬಳೆ, “ಇತ್ತೀಚಿನ ದಿನಗಳಲ್ಲಿ ಧೈರ್ಯಶಾಲಿ ಮತ್ತು ನಿಷ್ಠಾವಂತ ಪತ್ರಕರ್ತರ ಮೇಲೆ ಸುಳ್ಳು ಕೇಸ್‌ಗಳನ್ನು ದಾಖಲಿಸಿ ಅವರನ್ನು ದಬ್ಬಾಳಿಕೆ ಮಾಡುವ ಕ್ರೂರ ಪ್ರಯತ್ನ ನಡೆಯುತ್ತಿದೆ. ಇದು ಪತ್ರಿಕೋದ್ಯಮದ ಸ್ವಾತಂತ್ರ್ಯಕ್ಕೆ ನೀಡಲಾಗುತ್ತಿರುವ ನೇರ ಧಕ್ಕೆ,” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.“ಪತ್ರಕರ್ತರು ಮನೆಯಲ್ಲಿ ಕುಳಿತುಕೊಳ್ಳಬೇಕಾದ ಸ್ಥಿತಿ ಬರಬಾರದು. ಎಲ್ಲ ತಾಲೂಕುಗಳ ಪದಾಧಿಕಾರಿಗಳು ಸಂಘಟಿತವಾಗಿ ಒಟ್ಟಾಗಿ ಪ್ರತಿಭಟನೆಯಲ್ಲೂ ಭಾಗವಹಿಸಬೇಕು. ಸಂಘಟನೆಯ ಯಾವುದೇ ಸದಸ್ಯರ ಮೇಲೆ ದಬ್ಬಾಳಿಕೆ ಬಂದಾಗ ತಕ್ಷಣ ಸಂಬಂಧಿತ ತಾಲೂಕು ಪದಾಧಿಕಾರಿಗಳು ಸ್ಥಳಕ್ಕೆ ಧಾವಿಸಬೇಕು,” ಎಂದು ಅವರು ಕರೆ ನೀಡಿದರು.ಪತ್ರಕರ್ತರ ತಲೆಮೇಲೆ ಮಸಿ ಬಳಿಯುವ ಕೆಲಸ ನಡೆಯುತ್ತಿದೆ ಅಂತವರು ಖಂಡನೆ ವ್ಯಕ್ತಪಡಿಸಿ, “ಪತ್ರಕರ್ತರ ಹೆಸರಿನಲ್ಲಿ ಹಣದ ದಂಧೆಯಲ್ಲಿ ತೊಡಗಿರುವವರು ನಿಜವಾದ ಪತ್ರಕರ್ತರ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಇಂತಹವರ ವಿರುದ್ಧವೂ ನಾವು ಧ್ವನಿಯೆತ್ತಲೇ ಬೇಕು,” ಎಂದು ಸ್ಪಷ್ಟ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ವಿವಿಧ ತಾಲೂಕುಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಉಪಸ್ಥಿತರಿದ್ದರು. ನೂತನವಾಗಿ ಸೇರ್ಪಡೆಯಾದ ಪದಾಧಿಕಾರಿಗಳಾಗಿ:ಶ್ರೀಕಾಂತ ಚೌಗಲಾ – ಜಿಲ್ಲಾ ಗೌರವಾಧ್ಯಕ್ಷರುಗಂಗಾಧರ ಶಿರಗಾಂವಿ – ಜಿಲ್ಲಾ ಉಪಾಧ್ಯಕ್ಷರುಸಂತೋಷ ಪಾಟೀಲ – ಹುಕ್ಕೇರಿ ತಾಲೂಕು ಉಪಾಅಧ್ಯಕ್ಷರುಶಿವರಾಜ ಕೋಳಿ – ಅಥಣಿ ತಾಲೂಕು ಸಂಘಟನಾ ಸದಸ್ಯರುಮೋಹನ ಕಾಂಬಳೆ – ರಾಯಬಾಗ ತಾಲೂಕು ಸಂಘಟನಾ ಸದಸ್ಯರುಅಥಣಿ, ರಾಯಬಾಗ, ಗೋಕಾಕ್, ಚನ್ನಮ್ಮನ ಕಿತ್ತೂರು ಸೇರಿದಂತೆ ವಿವಿಧ ತಾಲೂಕುಗಳಿಂದ ಅಧ್ಯಕ್ಷರು, ಉಪಾಧ್ಯಕ್ಷರು ಸಭೆಯಲ್ಲಿ ಭಾಗವಹಿಸಿದ್ದರು.ಅಧಿಕಾರಿಗಳಿಗೆ ಮತ್ತು ಜನತೆಗೆ ಒಂದು ಸ್ಪಷ್ಟ ಸಂದೇಶಇಂದಿನ ಜಾಗತಿಕ ಪ್ರಪಂಚದಲ್ಲಿ ಮಾಧ್ಯಮವು ನಾಲ್ಕನೇ ಸ್ತoಭವಾಗಿ ಪರಿಗಣಿಸಲ್ಪಡುತ್ತಿದೆ. ಪತ್ರಕರ್ತರು ತಮ್ಮ ಜೀವದ ಹಂಗು ತೊರೆದು, ನಿಷ್ಪಕ್ಷಪಾತವಾದ ಸತ್ಯವನ್ನು ಜನರ ಮುಂದಿಡುತ್ತಾರೆ. ಅವರ ಕರ್ತವ್ಯವನ್ನು ಅಡಚಣೆಗೊಳಿಸುವ, ಸುಳ್ಳು ಪ್ರಕರಣಗಳಲ್ಲಿ ಸಿಕ್ಕಿಹಾಕುವ, ಅಥವಾ ಅವರನ್ನು ಹಣದ ಬಲದಿಂದ ಮೌನಗೊಳಿಸುವ ಪ್ರಯತ್ನಗಳು ಪ್ರಜಾಪ್ರಭುತ್ವದ ನೆಲೆಯನ್ನು ನಡುಗಿಸುತ್ತವೆ.ಅದಕ್ಕಾಗಿ ಅಧಿಕಾರಿಗಳು ಮಾಧ್ಯಮದ ಮೇಲಿರುವ ಗೌರವವನ್ನು ಕಾಪಾಡಿ, ಸಹಕಾರ ನೀಡುವುದು ಅಗತ್ಯ. ಜೊತೆಗೆ ಸಾರ್ವಜನಿಕರೂ ಸಹ ಯಾರು ನಿಜವಾದ ಪತ್ರಕರ್ತರು, ಯಾರು ಬೋಗಸ್ – ಎಂಬುದನ್ನು ಗುರುತಿಸಿ, ಸುದ್ದಿಯ ಮೂಲವನ್ನು ಸರಿಯಾಗಿ ಅರ್ಥಮಾಡಿಕೊಳ್ಳುವುದು ಬಹುಮುಖ್ಯ.ನೈತಿಕತೆ, ಧೈರ್ಯ ಮತ್ತು ಸಮಾಜಪರ ನಿಟ್ಟಿನಲ್ಲಿ ಕೆಲಸಮಾಡುವ ಪತ್ರಕರ್ತರಿಗೆ ಪ್ರೋತ್ಸಾಹ ನೀಡುವುದು ಎಲ್ಲರ ಜವಾಬ್ದಾರಿ. ಮಾಧ್ಯಮವು ಸಮಾಜದ ಕಣ್ಣಾಗಿರುವುದರಿಂದ, ಆ ಕಣ್ಣನ್ನು ಕುಪ್ಪಳಿಸಬಾರದು – ಬದಲಿಗೆ ಅದರ ಮೂಲಕ ಸತ್ಯದ ಬೆಳಕು ಹರಡಬೇಕು.ವರದಿ: ಕೃಷ್ಣಾ ಕಡಲು ಕನ್ನಡ ಪತ್ರಿಕೆ, ಪತ್ರಕರ್ತರ ಪರವಾಗಿ.

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಕ್ಕೇರಿ : ಜುಲೈ 29 – ಹುಕ್ಕೇರಿ ತಾಲೂಕಿನ ಶಿಂದಿಹಟ್ಟಿ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಸುಟ್ಟು ಸುಮಾರು ₹25 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ. ರಾಮಪ್ಪ ಲಕ್ಷ್ಮಣ ಮಗದುಮ್ಮ ಅವರ ಮನೆಗೆ ಈ ದುರ್ಘಟನೆ ಸಂಭವಿಸಿದ್ದು, ಕುಟುಂಬ ಸಂಪೂರ್ಣವಾಗಿ ಬೀದಿಗೆ ಬಿದ್ದಿದೆ ಎಂದು ನೊಂದವರು ದೂರಿದ್ದಾರೆ.ಘಟನೆಯು ಸಂಭವಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬುದು ಸ್ಥಳೀಯರ ಆಕ್ರೋಶ. "ಇನ್ನಾದರೂ ಅಧಿಕಾರಿಗಳು ನೊಂದವರಿಗೆ ನೆರವಾಗಬೇಕು," ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ. ಕಾಂಬಳೆ ಅವರು ಖಂಡಿಸಿದ್ದಾರೆ.ಈ ವಿಚಾರ ತಿಳಿದ ಧ್ವನಿ ಸಂಘಟನೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಸ್ಥಳಕ್ಕೆ ತಕ್ಷಣ ದೌಡಾಯಿಸಿ ನೊಂದ ಕುಟುಂಬಕ್ಕೆ ದಿನಸಿ, ಬಟ್ಟೆ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಿಸಿ ಧೈರ್ಯ ತುಂಬಿದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ ಕಾಂಬಳೆ, ತಾಲೂಕಾ ಉಪಾಧ್ಯಕ್ಷ ಸಂತೋಷ ಪಾಟೀಲ, ಕಾರ್ಯದರ್ಶಿ ಶಾಂತಿನಾಥ ಮಗದುಮ್ಮ ಹಾಗೂ ಖಜಾಂಚಿ ಮಹಾಂತೇಶ ಬೇವಿಕಟ್ಟಿ ಉಪಸ್ಥಿತರಿದ್ದರು. ವರದಿ : ಸಂತೋಷ್ ಪಾಟೀಲ್, ಹುಕ್ಕೇರಿ.

ಹುಕ್ಕೇರಿ : ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮ ಪಂಚಾಯತ ಸಭಾ ಭವನ ಕಟ್ಟಡ ಉದ್ಘಾಟನಾ ಸಮಾರಂಭ ಜರಗಿತು 15ನೇ ಹಣಕಾಸು ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಗ್ರಾಮ ಪಂಚಾಯತ್ ಸಭಾ ಭವನ ಕಟ್ಟಡದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಹೈಷಿಕೇಶಾನಂದ ಬಾಬು ಮಹಾರಾಜರು ಮದಿಹಳ್ಳಿ ಹಾಗೂ ಶ್ರೀ ವಾಮನದೇವರು ಮದಿಹಳ್ಳಿ ಉದ್ಘಾಟಕರಾದ ಶ್ರೀ ಟಿ ಆರ್ ಮಲ್ಲಾಡದ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ್ ಪಂಚಾಯತ್ ಹುಕ್ಕೇರಿ ಹಾಗೂ ಶ್ರೀಮತಿ ಲಕ್ಕವ್ವ ಬಾಳಪ್ಪ ಬಾಗಿ ಅಧ್ಯಕ್ಷರು ಗ್ರಾಮ ಪಂಚಾಯತ ಮುದಿಹಳ್ಳಿ ಶ್ರೀಮತಿ ಕೋಮಲ ಬಸವರಾಜ್ ಹೊಸಮನಿ ಉಪಾಧ್ಯಕ್ಷರು ಹಾಗೂ ಶ್ರೀ ಸುರೇಶ್ ತಳವಾರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತ್ ಮದಿಹಳ್ಳಿ ಇವರ ಅಮೃತ ಹಸ್ತದಿಂದ ಉದ್ಘಾಟನಾ ಸಮಾರಂಭ ಜರುಗಿತು ಈ ಸಮಾರಂಭದಲ್ಲಿ ಶ್ರೀಮತಿ ಲಕ್ಕವ್ವಾ ಬಾಳಪ್ಪ ಬಾಗಿ ಅಧ್ಯಕ್ಷರು. ಸದಸ್ಯರಾದ ಹಸನ್ ರಾಜೇಸಾಬ್ ಸನದಿ. ಶ್ರೀ ಶಿವಾಜಿ ಶೆಟ್ಟೆಪ್ಪ ಗಾಡಿವಡ್ಡರ್. ಶ್ರೀ ಕಾಶಿನಾಥ್ ಓಮಣ್ಣಾ ಮುತಗಿ. ಸದ್ದಾಂ ಮಲಿಕ್ ಬಳಿಗಾರ. ಗಣಪತಿ ಮುರಾರಿ ವಾಳಕಿ. ಶ್ರೀಮತಿ ಶೋಭಾ ಶಿವಾನಂದ ಖಾನಾಪುರಿ. ಶ್ರೀಮತಿ ಶಂಕರವ್ವ ಬೋರಪ್ಪ ತಳವಾರ. ಶ್ರೀಧರ್ ಕಾಡಪ್ಪ ಚೌಗಲಾ. ಕೆಂಪಣ್ಣಾ ಚೌಗಲಾ. ಸತ್ಯಪ್ಪ ಶಿವಲಿಂಗ ಮಾದರ. ಗುರುಸಿದ್ಧ ಬಸವವಂತ ಹಿಡಕಲ್. ಶ್ರೀಮತಿ ದಾನಮ್ಮ ರಮೇಶ್ ಆಲಗೂರಿ. ಶ್ರೀಮತಿ ಶಿವಕ್ಕಾ ಪುಂಡಲೀಕ. ಶ್ರೀಮತಿ ಯಲ್ಲವ್ವ ಮಾರುತಿ ಕುರುಬರ. ರವೀಂದ್ರ ಬಾಬು ಚಾಗಲಾ. ಭೀಮ್ ಸೇನ್ ಬಾಗಿ.ಡಾ.ಕಾಡೇಶ ಹೊಸಮನಿ. ಅಂಬರೀಶ್ ಬನ್ನಕಗೋಳ. ಮಲ್ಲಿಕಾರ್ಜುನ್ ಗೋಟೂರಿ. ಸಂತೋಷ್ ಪಾಟೀಲ್. ಸದಾ ಬಾಗಿ. ಮಲ್ಲಪ್ಪ ಮಾಣಗಾವಿ. ಸುಲ್ತಾನ್ ಸನದಿ. ಶಿವಪ್ಪ ಮುತ್ತಗಿ. ಸಂಜು ಗಾಯಕವಾಡ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನಿ. ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಸಿಬ್ಬಂದಿ ವರ್ಗದವರು ಮದಿಹಳ್ಳಿ ಶಿರಗಾಂವ ಎಸ್ ಡಿ ಎಮ್ ಸಿ ಅಧ್ಯಕ್ಷರು ಸರ್ವ ಸದಸ್ಯರು ಮದಿಹಳ್ಳಿ ಮತ್ತು ಶಿರಗಾವ್ ಗ್ರಾಮದ ಊರಿನ ಗುರು ಹಿರಿಯರು ಮುಖಂಡರು ಮಹಿಳೆಯರು ಉಪಸ್ಥಿತರಿದ್ದರು. ವರದಿ : ಸಂತೋಷ ಪಾಟೀಲ್, ಹುಕ್ಕೇರಿ.

ರಾಯಬಾಗ : ಇಂದು ನಾವು 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. 1947 ರ ಆಗಸ್ಟ್ 15 ರಂದು ನಾವು ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದ ದಿನವನ್ನು ಸ್ಮರಿಸುತ್ತೇವೆ. ಈ ದಿನವನ್ನು ಆಚರಿಸುವಾಗ, ನಾವು ನಮ್ಮ ದೇಶಕ್ಕಾಗಿ ಹೋರಾಡಿದ ಎಲ್ಲ ಮಹಾನ್ ನಾಯಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿಕೊಳ್ಳುತ್ತೇವೆ.ಭಾರತವು ಒಂದು ಬೃಹತ್ ಮತ್ತು ವೈವಿಧ್ಯಮಯ ದೇಶ. ನಾವು ಅನೇಕ ಭಾಷೆಗಳು, ಸಂಸ್ಕೃತಿಗಳು ಮತ್ತು ಧರ್ಮಗಳನ್ನು ಹೊಂದಿದ್ದೇವೆ, ಆದರೆ ನಾವು ಒಂದೇ ರಾಷ್ಟ್ರದ ಭಾಗವಾಗಿದ್ದೇವೆ. ನಮ್ಮೆಲ್ಲರನ್ನೂ ಒಂದುಗೂಡಿಸುವ ಅಂಶವೆಂದರೆ ನಮ್ಮ ದೇಶದ ಮೇಲಿನ ಪ್ರೀತಿ ಮತ್ತು ಗೌರವ.ಸ್ವಾತಂತ್ರ್ಯವೆಂದರೆ ಕೇವಲ ರಾಜಕೀಯ ಸ್ವಾತಂತ್ರ್ಯವಲ್ಲ. ಇದು ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸ್ವಾತಂತ್ರ್ಯವನ್ನು ಒಳಗೊಂಡಿದೆ. ನಾವು ನಮ್ಮ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಶ್ರಮಿಸಬೇಕು. ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಶಾಖೆ ರಾಯಬಾಗ ಅಧ್ಯಕ್ಷರಾದ ಉಮೇಶ ಭೂಪಾಲ ಪೋಳ ಹೇಳಿದರು, ಅವರು ರಾಯಬಾಗ ಸರ್ಕಾರಿ ನೌಕರರ ಭವನದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಎಲ್ಲರಿಗೂ 79ನೇ ಸ್ವಾತಂತ್ರ್ಯ ದಿನಾಚರಣೆ ಶುಭಾಶಯಗಳು ತಿಳಿಸುತ್ತಾ ಮಾತನಾಡಿದರು, ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುರೇಶ್ ಕದ್ದು, ರಾಜ್ಯ ಪರಿಷತ್ ಸದಸ್ಯರಾದ ಮಲಿಕಜಾನ್ ಕೊರ್ಬು, ಸಂಘಟನಾ ಕಾರ್ಯದರ್ಶಿ ಕಲ್ಲಪ್ಪ ಗುಡಿಮನಿ, ನಾಮ ನಿರ್ದೇಶಿತ ನಿರ್ದೇಶಕರಾದ ಭಗವಂತ ಮಸಾಲಜಿ, ನಿಂಗಪ್ಪ ಬೀರಣಗಡ್ಡಿ, ಸದಾಶಿವ ಕಾಂಬಳೆ, ಪರಶುರಾಮ ಕುಂಬಾರ, ಸವಿತಾ ಜೋಲಾಪೂರೆ, ಮತ್ತಿತರು ಹಾಜರಿದ್ದರು.