ಚಿಕ್ಕೋಡಿ ಜಿಲ್ಲಾ ಘೋಷಣೆ 2 ನೇ ಅಕ್ಟೋಬರ್ ಗಾಂಧಿಜೀ ಜಯಂತಿಯಂದು ಆಗಬೇಕೆಂದು, ಶ್ರಿ ಸಂಪಾಧನಾ ಮಹಾ ಸ್ವಾಮೀಜೀ ಅವರ ನೇತೃತ್ವದಲ್ಲಿ, ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿ ಮತ್ತು ಹಕ್ಕೊತ್ತಾಯ ಕಾರ್ಯಕ್ರಮ ಜರುಗಿತು.**ಸಂಪಾದನಾ ಸ್ವಾಮೀಜೀ ಅವರು ಮಾತನಾಡಿ ಮೂರು ದಶಕಗಳಿಂದ ನಮ್ಮ ಹೋರಾಟ ಸತತವಾಗಿ ನಡೆದಿದೆ, ಬೆಳಗಾವಿ ವಿಶಾಲವಾದ ಜಿಲ್ಲೆ ಆಡಳಿತ ದೃಷ್ಟಿಯಿಂದ ಜಿಲ್ಲಾ ವಿಭಜನೆ ಮಾಡಿ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯಾಗಿ ಘೋಷಣೆ ಮಾಡಿ, ಜಿಲ್ಲೆಗೆ ಬೇಕಾಗುವ ಎಲ್ಲ ಕಚೇರಿಗಳು ಚಿಕ್ಕೋಡಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ, ಜನರ ರೈತರ ಯುವಕರ ಅನುಕೂಲಕ್ಕಾಗಿ ಜಿಲ್ಲಾ ಘೋಷಣೆ ಅನಿವಾರ್ಯವಾಗಿದೆ, ನಾವು ಮೂರು ದಶಕಗಳಿಂದ ಗಾಂಧಿಯವರ ಸ್ವಾತಂತ್ರ್ಯ ಹೋರಾಟದಂತೆ ಅಹಿಂಸಾತ್ಮಕ ಹೋರಾಟ ಮಾಡುತ್ತ ಬಂದಿದ್ದೇವೆ, ಯಾರಿಗೂ ನಾವು ತೊಂದರೆ ಮಾಡಿಲ್ಲ, ಕಾರಣ ಬರುವ ಗಾಂಧೀಜೀ ಜಯಂತಿಯ ದಿನದಂದು ಚಿಕ್ಕೋಡಿ ಜಿಲ್ಲಾ ಘೋಷಣೆ ಮಾಡಿ ಎಂದು ಸರಕಾರಕ್ಕೆ ಒತ್ತಾಯಿಸಿದರು.ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ಸದನದಲ್ಲಿ ಸತೀಶ ಜಾರ್ಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ, ಪ್ರಕಾಶ ಹುಕ್ಕೇರಿ, ಶಶಿಕಲಾ ಜೊಲ್ಲೆ, ಮಹೇಂದ್ರ ತಮ್ಮಣ್ಣವರ ಇವರು ಚಿಕ್ಕೋಡಿ ಜಿಲ್ಲೆ ಗಾಗಿ ಒತ್ತಾಯಿಸಿದ್ದಾರೆ, ಚಿಕ್ಕೋಡಿ ಜಿಲ್ಲೆಯಾಗಲು ಪ್ರಭಾವಿ ವ್ಯಕ್ತಿಗಳು ಕಂಟಕ ಮಾಡುತ್ತಿದ್ದಾರೆ, ಗೋಕಾಕ ಜಿಲ್ಲೆಯಾಗಲು ನಮ್ಮದೇನು ಅಭ್ಯಂತರವಿಲ್ಲ, ಕೂಡಲೇ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯಾಗಿ ಘೋಷಣೆ ಮಾಡಿ, ಇಲ್ಲಿಯವರೆಗೆ, ಕಿವಡ ವಕೀಲರು, ಮಾಜಿ ಶಾಸಕ ಬಾಳಾಸಾಹೇಬ ವಡ್ಡರ, ಹಕ್ಕ್ಯಾಗೋಳ, ಶೆಟ್ಟಿ ವಕೀಲರು, ಕಟ್ಟಿಮನಿ, ಹೀಗೆ ಬಹಳಷ್ಟು ಹಿರಿಯರು ಹೋರಾಟ ಮಾಡಿದ್ದಾರೆ, ನುಡಿದಂತೆ ನಡೆಯುವ ಸರಕಾರ ಕೂಡಲೇ ಚಿಕ್ಕೋಡಿ ಜಿಲ್ಲೆ ಘೋಷಣೆ ಮಾಡಲಿ ಎಂದು ಹೇಳಿದರು.ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಸಂಜು ಬಡಿಗೇರ ಮಾತನಾಡಿ, ನಮ್ಮ ಜೀವನ ಕೇವಲ ಹೋರಾಟದಲ್ಲಿಯೇ ಮುಂದೆವರಿದಿದೆ, ಪ್ರತಿಯೊಂದು ಸರಕಾರ ಸುಳ್ಳು ಹೇಳುತ್ತಲೇ ಬಂದಿವೆ, ಚಿಕ್ಕೋಡಿ ಜಿಲ್ಲೆ ಘೋಷಣೆ ಆಗದಿದ್ದಲ್ಲಿ ಮಾಜಿ ಸಚಿವರಾದ ಉಮೇಶ ಕತ್ತಿಯವರು ಕೇಳಿದ ಹಾಗೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಿ ಕೇಳುವ ದಿವಸಗಳು ಬರಲಿವೆ, ತೆಲಂಗಾನಾ ಮಾದರಿಯಲ್ಲಿ ಉಗ್ರ ಹೋರಾಟ ಮಾಡುವ ಪರಿಸ್ಥಿತಿ ಎದುರಾಗಲಿದೆ ಎಂದು ಸರಕಾರಕ್ಕೆ ಕಡಕ್ ಎಚ್ಚರಿಕೆ ನೀಡಿದರು..ಈ ಸಂಧರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ, ಉಪಾಧ್ಯಕ್ಷ ಶ್ರೀಕಾಂತ ಅಸೋದೆ, ಹೋರಾಟಗಾರರಾದ ಅನೀಲ ನಾವಿ, ಅಪ್ಪಾಸಾಹೇಬ ಹಿರೇಕೋಡಿ, ಪ್ರತಾಪ ಪಾಟೀಲ, ಚಂದ್ರಶೇಖರ ಅರಭಾವಿ, ಮಂಜು ಪರಗೌಡರ, ಖಾನಪ್ಪಾ ಬಾಡಕರ, ದುಂಡಪ್ಪಾ ಜೌಗಲಾ, ರುದ್ರಯ್ಯಾ ಹಿರೇಮಠ, ಮೋಹನ ಪಾಟೀಲ, ಶಿವು ಮದಾಳೆ, ಸಚೀನ ದೊಡ್ಡಮನಿ, ಮಾಳು ಕರೆಣ್ಣವರ, ರಫೀಕ್ ಪಠಾಣ, ಶಿವಾಜಿ ಖಾಡೆ, ಸಂತೋಷ ಕುರಣೆ, ಅಪ್ಪಾಸಾಹೇಬ ಕುರಣೆ, ಸಿದ್ಧರಾಮ ಕರಗಾವೆ, ಸುರೇಶ ಖದ್ದಿ ಹಾಗೂ ಇನ್ನಿತರ ಹೋರಾಟಗಾರರು ಉಪಸ್ಥಿತರಿದ್ದರು.

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಕ್ಕೇರಿ : ಜುಲೈ 29 – ಹುಕ್ಕೇರಿ ತಾಲೂಕಿನ ಶಿಂದಿಹಟ್ಟಿ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಸುಟ್ಟು ಸುಮಾರು ₹25 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ. ರಾಮಪ್ಪ ಲಕ್ಷ್ಮಣ ಮಗದುಮ್ಮ ಅವರ ಮನೆಗೆ ಈ ದುರ್ಘಟನೆ ಸಂಭವಿಸಿದ್ದು, ಕುಟುಂಬ ಸಂಪೂರ್ಣವಾಗಿ ಬೀದಿಗೆ ಬಿದ್ದಿದೆ ಎಂದು ನೊಂದವರು ದೂರಿದ್ದಾರೆ.ಘಟನೆಯು ಸಂಭವಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬುದು ಸ್ಥಳೀಯರ ಆಕ್ರೋಶ. "ಇನ್ನಾದರೂ ಅಧಿಕಾರಿಗಳು ನೊಂದವರಿಗೆ ನೆರವಾಗಬೇಕು," ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ. ಕಾಂಬಳೆ ಅವರು ಖಂಡಿಸಿದ್ದಾರೆ.ಈ ವಿಚಾರ ತಿಳಿದ ಧ್ವನಿ ಸಂಘಟನೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಸ್ಥಳಕ್ಕೆ ತಕ್ಷಣ ದೌಡಾಯಿಸಿ ನೊಂದ ಕುಟುಂಬಕ್ಕೆ ದಿನಸಿ, ಬಟ್ಟೆ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಿಸಿ ಧೈರ್ಯ ತುಂಬಿದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ ಕಾಂಬಳೆ, ತಾಲೂಕಾ ಉಪಾಧ್ಯಕ್ಷ ಸಂತೋಷ ಪಾಟೀಲ, ಕಾರ್ಯದರ್ಶಿ ಶಾಂತಿನಾಥ ಮಗದುಮ್ಮ ಹಾಗೂ ಖಜಾಂಚಿ ಮಹಾಂತೇಶ ಬೇವಿಕಟ್ಟಿ ಉಪಸ್ಥಿತರಿದ್ದರು. ವರದಿ : ಸಂತೋಷ್ ಪಾಟೀಲ್, ಹುಕ್ಕೇರಿ.

ಹುಕ್ಕೇರಿ : ಮಾದಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಒಂದೇ ದಿನದಲ್ಲಿ ಎರಡೆರಡು ಕಾರ್ಯಕ್ರಮ ಗಳನ್ನು ನಡೆಸಿ ಸಮಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿರುವ ಮದಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳು,ಸಿಬ್ಬಂದಿ ವರ್ಗ ಸರ್ವ ಸದಸ್ಯ ಮಂಡಳಿ ಮೊದಲನೆಯದ್ದು "ಜಮಾಬಂದಿ ಕಾರ್ಯಕ್ರಮ" ಎರಡನೆಯದು "ಕಾವಲು ಸಮಿತಿ ಸಭೆ" ಹೀಗೆ ಹಲವಾರು ಕಾರ್ಯಕ್ರಮಗಳನ್ನು ಮಾಡಿ ಮದಿಹಳ್ಳಿ ಗ್ರಾಮವನ್ನು ಅಭಿವೃದ್ಧಿಯ ಹಾದಿಯತ್ತ ಕರೆದೊಯ್ಯಲು ಶ್ರಮಿಸುತ್ತಿರುವ ಮಾದಿಹಳ್ಳಿ ಗ್ರಾಮ ಪಂಚಾಯತ ಆಡಳಿತ ಮಂಡಳಿ ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ತಳವಾರ, ಅಧ್ಯಕ್ಷರಾದ ಲಕ್ಕವ್ವ ಬಾಗಿ, ಉಪಾಧ್ಯಕ್ಷರಾದ ಕೋಮಲ್ ಹೊಸಮನಿ, ಪಶು ವೈದ್ಯಾಧಿಕಾರಿ ರಮೇಶ್ ಕದಮ, ಅಂಗನವಾಡಿ ಮೇಲ್ವಿಚಾರಕರು ಜಿ. ಎನ್. ಮಾನಗಾವಿ, ಸದಸ್ಯರಾದ ಮಾನಿಕ ಬಾಗಿ, ಗಣಪತಿ ವಾಳಕಿ, ಕಾಶಪ್ಪ ಮುತಗಿ, ಶಿವಾಜಿ ಗಾಡಿವಡ್ಡರ, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ವರದಿ : ಸಂತೋಷ ಪಾಟೀಲ್, ಹುಕ್ಕೇರಿ.

ಹುಕ್ಕೇರಿ : ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮ ಪಂಚಾಯತ ಸಭಾ ಭವನ ಕಟ್ಟಡ ಉದ್ಘಾಟನಾ ಸಮಾರಂಭ ಜರಗಿತು 15ನೇ ಹಣಕಾಸು ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಗ್ರಾಮ ಪಂಚಾಯತ್ ಸಭಾ ಭವನ ಕಟ್ಟಡದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಹೈಷಿಕೇಶಾನಂದ ಬಾಬು ಮಹಾರಾಜರು ಮದಿಹಳ್ಳಿ ಹಾಗೂ ಶ್ರೀ ವಾಮನದೇವರು ಮದಿಹಳ್ಳಿ ಉದ್ಘಾಟಕರಾದ ಶ್ರೀ ಟಿ ಆರ್ ಮಲ್ಲಾಡದ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ್ ಪಂಚಾಯತ್ ಹುಕ್ಕೇರಿ ಹಾಗೂ ಶ್ರೀಮತಿ ಲಕ್ಕವ್ವ ಬಾಳಪ್ಪ ಬಾಗಿ ಅಧ್ಯಕ್ಷರು ಗ್ರಾಮ ಪಂಚಾಯತ ಮುದಿಹಳ್ಳಿ ಶ್ರೀಮತಿ ಕೋಮಲ ಬಸವರಾಜ್ ಹೊಸಮನಿ ಉಪಾಧ್ಯಕ್ಷರು ಹಾಗೂ ಶ್ರೀ ಸುರೇಶ್ ತಳವಾರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತ್ ಮದಿಹಳ್ಳಿ ಇವರ ಅಮೃತ ಹಸ್ತದಿಂದ ಉದ್ಘಾಟನಾ ಸಮಾರಂಭ ಜರುಗಿತು ಈ ಸಮಾರಂಭದಲ್ಲಿ ಶ್ರೀಮತಿ ಲಕ್ಕವ್ವಾ ಬಾಳಪ್ಪ ಬಾಗಿ ಅಧ್ಯಕ್ಷರು. ಸದಸ್ಯರಾದ ಹಸನ್ ರಾಜೇಸಾಬ್ ಸನದಿ. ಶ್ರೀ ಶಿವಾಜಿ ಶೆಟ್ಟೆಪ್ಪ ಗಾಡಿವಡ್ಡರ್. ಶ್ರೀ ಕಾಶಿನಾಥ್ ಓಮಣ್ಣಾ ಮುತಗಿ. ಸದ್ದಾಂ ಮಲಿಕ್ ಬಳಿಗಾರ. ಗಣಪತಿ ಮುರಾರಿ ವಾಳಕಿ. ಶ್ರೀಮತಿ ಶೋಭಾ ಶಿವಾನಂದ ಖಾನಾಪುರಿ. ಶ್ರೀಮತಿ ಶಂಕರವ್ವ ಬೋರಪ್ಪ ತಳವಾರ. ಶ್ರೀಧರ್ ಕಾಡಪ್ಪ ಚೌಗಲಾ. ಕೆಂಪಣ್ಣಾ ಚೌಗಲಾ. ಸತ್ಯಪ್ಪ ಶಿವಲಿಂಗ ಮಾದರ. ಗುರುಸಿದ್ಧ ಬಸವವಂತ ಹಿಡಕಲ್. ಶ್ರೀಮತಿ ದಾನಮ್ಮ ರಮೇಶ್ ಆಲಗೂರಿ. ಶ್ರೀಮತಿ ಶಿವಕ್ಕಾ ಪುಂಡಲೀಕ. ಶ್ರೀಮತಿ ಯಲ್ಲವ್ವ ಮಾರುತಿ ಕುರುಬರ. ರವೀಂದ್ರ ಬಾಬು ಚಾಗಲಾ. ಭೀಮ್ ಸೇನ್ ಬಾಗಿ.ಡಾ.ಕಾಡೇಶ ಹೊಸಮನಿ. ಅಂಬರೀಶ್ ಬನ್ನಕಗೋಳ. ಮಲ್ಲಿಕಾರ್ಜುನ್ ಗೋಟೂರಿ. ಸಂತೋಷ್ ಪಾಟೀಲ್. ಸದಾ ಬಾಗಿ. ಮಲ್ಲಪ್ಪ ಮಾಣಗಾವಿ. ಸುಲ್ತಾನ್ ಸನದಿ. ಶಿವಪ್ಪ ಮುತ್ತಗಿ. ಸಂಜು ಗಾಯಕವಾಡ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನಿ. ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಸಿಬ್ಬಂದಿ ವರ್ಗದವರು ಮದಿಹಳ್ಳಿ ಶಿರಗಾಂವ ಎಸ್ ಡಿ ಎಮ್ ಸಿ ಅಧ್ಯಕ್ಷರು ಸರ್ವ ಸದಸ್ಯರು ಮದಿಹಳ್ಳಿ ಮತ್ತು ಶಿರಗಾವ್ ಗ್ರಾಮದ ಊರಿನ ಗುರು ಹಿರಿಯರು ಮುಖಂಡರು ಮಹಿಳೆಯರು ಉಪಸ್ಥಿತರಿದ್ದರು. ವರದಿ : ಸಂತೋಷ ಪಾಟೀಲ್, ಹುಕ್ಕೇರಿ.